March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

ಕೊಕ್ಕಡ:ಕೊಕ್ಕಡ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ಅ.1 ರಂದು ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಂತೆ ಶ್ರಮದಾನ ನಡೆಸಲಾಯಿತು.

ಇದೇ ಸಂದರ್ಭದಲ್ಲಿ ಸ್ವಚ್ಛತಾ ಘಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಾದ ಶ್ರೀಮತಿ ವಿಮಲಾ, ಗೀತಾ, ಗಾಯತ್ರಿ ಹಾಗೂ ವಾಹನ ಚಾಲಕರಾದ ಕೇಶವ ಅವರನ್ನು ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಸನ್ಮಾನಿಸಲಾಯಿತು.

ಗ್ರಾಮದ ಜನರಿಗೆ ನೀಡುತ್ತಿರುವ ಸೇವೆಯನ್ನು ಗುರುತಿಸಿ ಜೇಸಿ ಅಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ ಅವರು ಶಾಲು, ಸ್ಮರಣಿಕೆ ಹಾಗೂ ನಗದು ಪುರಸ್ಕಾರ ನೀಡಿ ಅಭಿನಂದಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಸ್ವಚ್ಛತಾ ಪ್ರಮಾಣ ಬೋಧಿಸಿದರು. ಹೊಸದಾಗಿ ಪಂಚಾಯಿತಿಗೆ ಆಯ್ಕೆಯಾದ ಅಧ್ಯಕ್ಷರು ಬೇಬಿ, ಉಪಾಧ್ಯಕ್ಷರಾದ ಪ್ರಭಾಕರ ಗೌಡ ಅವರನ್ನು ಜೇಸಿ ವತಿಯಿಂದ ಅಭಿನಂದಿಸಲಾಯಿತು.

ಗ್ರಾಮ ಪಂಚಾಯಿತಿ ಸದಸ್ಯರಾದ ಯೋಗೀಶ್ ಆಲಂಬಿಲ, ಪವಿತ್ರ, ವಿಶ್ವನಾಥ ಕಕ್ಕುದೋಳೀ, ವನಜಾಕ್ಷಿ , ಜಗದೀಶ್, ಪ್ರಮೀಳಾ, ಪುರುಷೋತ್ತಮ, ಶರತ್, ವನಿತಾ, ಜಾನಕಿ, ಲತಾ, ಕಾರ್ಯದರ್ಶಿ , ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.ಶ್ರಮದಾನದಲ್ಲಿ ಜೇಸಿ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರಾದ ಕೆ. ಶ್ರೀಧರ್ ರಾವ್, ಕಾರ್ಯದರ್ಶಿ ವಿಕ್ಟರ್ ಸುವಾರಿಸ್, ಲೇಡಿ ಜೇಸಿ ವಿಭಾಗದ ಅಧ್ಯಕ್ಷರು ದೀಪಾ, ನರಸಿಂಹ ನಾಯಕ್, ಜೋಸೆಫ್ ಪಿರೇರಾ, ಜಸ್ವಂತ್ ಪಿರೇರಾ ಸಹಕರಿಸಿದರು.

Related posts

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಕ್ರೀಡಾ ದಿನದ ಮಹತ್ವದ ಕುರಿತು ಕಾರ್ಯಕ್ರಮ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ವೇಣೂರು ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸಿರಿ ಸಂಸ್ಥೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಸಿದ್ದಕಟ್ಟೆ ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ಯುವ ಉದ್ಯಮಿ, ಪ್ರಗತಿಪರ ಕೃಷಿಕ ಕಿರಣ್ ಕುಮಾರ್ ಮಂಜಿಲ ಆಯ್ಕೆ

Suddi Udaya
error: Content is protected !!