September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

ಕೊಕ್ಕಡ:ಕೊಕ್ಕಡ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ಅ.1 ರಂದು ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಂತೆ ಶ್ರಮದಾನ ನಡೆಸಲಾಯಿತು.

ಇದೇ ಸಂದರ್ಭದಲ್ಲಿ ಸ್ವಚ್ಛತಾ ಘಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಾದ ಶ್ರೀಮತಿ ವಿಮಲಾ, ಗೀತಾ, ಗಾಯತ್ರಿ ಹಾಗೂ ವಾಹನ ಚಾಲಕರಾದ ಕೇಶವ ಅವರನ್ನು ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಸನ್ಮಾನಿಸಲಾಯಿತು.

ಗ್ರಾಮದ ಜನರಿಗೆ ನೀಡುತ್ತಿರುವ ಸೇವೆಯನ್ನು ಗುರುತಿಸಿ ಜೇಸಿ ಅಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ ಅವರು ಶಾಲು, ಸ್ಮರಣಿಕೆ ಹಾಗೂ ನಗದು ಪುರಸ್ಕಾರ ನೀಡಿ ಅಭಿನಂದಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಸ್ವಚ್ಛತಾ ಪ್ರಮಾಣ ಬೋಧಿಸಿದರು. ಹೊಸದಾಗಿ ಪಂಚಾಯಿತಿಗೆ ಆಯ್ಕೆಯಾದ ಅಧ್ಯಕ್ಷರು ಬೇಬಿ, ಉಪಾಧ್ಯಕ್ಷರಾದ ಪ್ರಭಾಕರ ಗೌಡ ಅವರನ್ನು ಜೇಸಿ ವತಿಯಿಂದ ಅಭಿನಂದಿಸಲಾಯಿತು.

ಗ್ರಾಮ ಪಂಚಾಯಿತಿ ಸದಸ್ಯರಾದ ಯೋಗೀಶ್ ಆಲಂಬಿಲ, ಪವಿತ್ರ, ವಿಶ್ವನಾಥ ಕಕ್ಕುದೋಳೀ, ವನಜಾಕ್ಷಿ , ಜಗದೀಶ್, ಪ್ರಮೀಳಾ, ಪುರುಷೋತ್ತಮ, ಶರತ್, ವನಿತಾ, ಜಾನಕಿ, ಲತಾ, ಕಾರ್ಯದರ್ಶಿ , ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.ಶ್ರಮದಾನದಲ್ಲಿ ಜೇಸಿ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರಾದ ಕೆ. ಶ್ರೀಧರ್ ರಾವ್, ಕಾರ್ಯದರ್ಶಿ ವಿಕ್ಟರ್ ಸುವಾರಿಸ್, ಲೇಡಿ ಜೇಸಿ ವಿಭಾಗದ ಅಧ್ಯಕ್ಷರು ದೀಪಾ, ನರಸಿಂಹ ನಾಯಕ್, ಜೋಸೆಫ್ ಪಿರೇರಾ, ಜಸ್ವಂತ್ ಪಿರೇರಾ ಸಹಕರಿಸಿದರು.

Related posts

ನ.23 : ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ಲಾಯಿಲ ಇದರ ಬೆಳ್ಳಿ ಹಬ್ಬ ಸಂಭ್ರಮ

Suddi Udaya

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟ ಬಳಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ: ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya
error: Content is protected !!