ತಾಲೂಕು ಸುದ್ದಿ

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

ಬೆಳ್ತಂಗಡಿ: ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್ ಪುತ್ತೂರು ಇದರ ಆಶ್ರಯದಲ್ಲಿ ಈ ವರ್ಷದ ಗಣೇಶೋತ್ಸವದ ಅಂಗವಾಗಿ ನಡೆದ ಬಣ್ಣದ ಗಜಮುಖ-23 ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆಯು ನೆಹರು ನಗರದ ಕಛೇರಿಯಲ್ಲಿ ನಡೆಯಿತು.
ಒಟ್ಟು43 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ವಿಜೇತರಿಗೆ ನೆನಪಿನ ಕಾಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಅದೇ ರೀತಿ ಭಾಗವಹಿಸಿದ ಪ್ರತಿ ಸದಸ್ಯರಿಗೆ ಅಭಿನಂದನ ಪತ್ರ ನೀಡುವ ಮೂಲಕ ಎಲ್ಲಾ ಸ್ಪರ್ಧಾಳುಗಳನ್ನು ಪ್ರೋತ್ಸಾಹಿಸಲಾಯಿತು.

ವಿಶೇಷವಾಗಿ 12 ಜನರಿಂದ ಆರಂಭಗೊಂಡ ಈ ಗ್ರೂಪ್,ಇದರ ಮೂಲಕ ಹಲವಾರು ‌ಸಮಾಜಮುಖಿ ಸಹಾಯ ‌ಹಸ್ತ ನೀಡುವ ಕೆಲಸ ನಡೆಯುತ್ತ ಬಂದಿದ್ದು ಯಾವುದೇ ರಾಜಕೀಯ ನಡೆಯಿಲ್ಲದೇ ನಾವೆಲ್ಲರೂ ಒಂದೇ ಎಂಬ ಧ್ಯೇಯದ‌ ಮೂಲಕ ಈ ತಂಡ‌ ಮುನ್ನಡೆಯುತ್ತಿದೆ.
ಈ ಸಂದರ್ಭದಲ್ಲಿ ಗ್ರೂಪ್ ನ ಸದಸ್ಯರಾದ ಮನ್ಮಥ ಶೆಟ್ಟಿ ಪುತ್ತೂರು, ಯೋಗೀಶ್ ಅಳಕೆ,ಪ್ರವೀಣ್ ಕೊಯಿಲ,ಪ್ರಸಾದ್ ಕೊಯಿಲ,ರಾಜೇಶ್ ಕುಲಾಲ್,ಪ್ರಕಾಶ್ ಮಿತ್ತೂರು,ದಾಮೋದರ ಪರಮಾರ್ , ಸುಪ್ರೀತ್ ಕೊಯಿಲ, ಶ್ರೀನಿಧಿ ಸುಳ್ಯ ಉಪಸ್ಥಿತರಿದ್ದರು

Related posts

ಜಿಲ್ಲಾ ಮಟ್ಟದ ಕ್ಲೇ ಮಾಡೆಲಿಂಗ್ ಸ್ಪರ್ಧೆ : ಅಂಡಿಂಜೆ ಸ.ಉ. ಪ್ರಾ.ಶಾಲೆ ವಿದ್ಯಾರ್ಥಿ ಹಾಷಿಕ್ ಪ್ರಥಮ ಸ್ಥಾನ

Suddi Udaya

ವೇಣೂರು ಸರ್ಕಾರಿ ಪ್ರೌಢಶಾಲೆ: OSAAT ಸಂಸ್ಥೆಯಿಂದ ರೂ.1.25 ಕೋಟಿ ಅನುದಾನದಲ್ಲಿ ಶಾಲಾ ಕೊಠಡಿಗೆ ಶಿಲಾನ್ಯಾಸ

Suddi Udaya

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಡಾ. ಹೆಗ್ಗಡೆ ಸಂತಾಪ

Suddi Udaya

ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಣಾಧಿಕಾರಿ ಎಂ.ವೈ. ಹರೀಶ್ ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಅಳದಂಗಡಿ : ಕೆದ್ದು ವಿದ್ಯಾರ್ಥಿ ನಿಲಯದ ಆವರಣದಲ್ಲಿ ಕಾಣಿಸಿಕೊಂಡ ಬೃಹತ್ ಗಾತ್ರದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಅರಣ್ಯ ಬಿಟ್ಟ ಸ್ನೇಕ್ ಅಶೋಕ್

Suddi Udaya

ರೋಟರಿ ಕ್ಲಬ್ ವಲಯ ಮಟ್ಟದ ಕ್ರಿಕೆಟ್ ಸ್ಪರ್ಧೆ

Suddi Udaya
error: Content is protected !!