July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

ವೇಣೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 29ರಂದು ಕುಕ್ಕೇಡಿಯಲ್ಲಿ ನಡೆದಿದೆ.

ಕುಕ್ಕೇಡಿ ಗ್ರಾಮದ ಗೋಳಿಯಂಗಡಿಬೊಳ್ಳಾಲು ಮನೆ ದಿ| ಅಣ್ಣಪ್ಪ ಮೂಲ್ಯರ ಪುತ್ರಿ ಶ್ರೀಮತಿ ಹರಿಣಾಕ್ಷಿ (35 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಶ್ರೀಮತಿ ಹರಿಣಾಕ್ಷಿ ಅವರನ್ನು ಸುಮಾರು 8 ವರ್ಷ ಹಿಂದೆ ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ನಾಗೇಶ ಬಂಗೇರ ಎಂಬವರಿಗೆ ಜಾತಿ ಸಂಪ್ರದಾಯದಂತೆ ಮದುವೆ ಮಾಡಿ ಕೊಡಲಾಗಿತ್ತು. ಗಂಡನ ಮನೆಯಲ್ಲಿ ಸಂಸಾರ ಮಾಡಿಕೊಂಡಿದ್ದ ಹರಿಣಾಕ್ಷಿಯವರು ಮದುವೆಯಾಗಿ ಸ್ವಲ್ಪ ಸಮಯದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿ, ಸಂಪೂರ್ಣ ಗುಣಮುಖರಾಗಿ ರಲಿಲ್ಲ. ಸುಮಾರು ಮೂರುವರೇ ತಿಂಗಳ ಹಿಂದೆ ಎರಡನೇ ಹೆರಿಗೆಯಾಗಿ ತವರು ಮನೆಯಲ್ಲಿ ಇದ್ದವರು ಸುಮಾರು 20 ದಿನ ಗಳ ಹಿಂದೆ ತನ್ನ ತಾಯಿ ಶ್ರೀಮತಿ ಮೋನಮ್ಮ ರವರೊಂದಿಗೆ ಗಂಡನ ಮನೆಗೆ ಹೋಗಿದ್ದರು.

ಸೆ.28 ರಂದು ಮಾನಸಿಕ ಖಿನ್ನತೆಗೆ ಒಳಪಟ್ಟವಳನ್ನು ಗಂಡನ ಮನೆಯಿಂದ ಕುಕ್ಕೆಡಿಯ ತಾಯಿ ಮನೆಗೆ ಕರೆದುಕೊಂಡು ಬಂದಿದ್ದರು. 29 ರಂದು ಬೆಳಗಿನ ಜಾವ ಹರಿಣಾಕ್ಷಿಯವರು ಮಾನಸಿಕ ಖಿನ್ನತೆಯಿಂದ ಎದ್ದು ಹೋಗಿ ತೋಟದ ಬಳಿಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವೇಣೂರು ಪೊಲೀಸ್ ಠಾಣೆಗೆ ಮೃತರ ಸಹೋದರ ಧನಂಜಯ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಇಂದಬೆಟ್ಟು ಸ. ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಸ್ವಚ್ಛ ಕಿಲ್ಲೂರು ಅಭಿಯಾನ

Suddi Udaya

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya

ರಾಜ್ಯ ಮಟ್ಟದ ಪೊಲೀಸ್‌ ಇಲಾಖಾ ಕ್ರೀಡಾಕೂಟ: ಪೋರ್ಟ್ರೇಟ್ ಪಾರ್ಲೆ ಟೆಸ್ಟ್ ನಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯ ವಿಜಯಕುಮಾ‌ರ್ ರೈ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ: ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

Suddi Udaya
error: Content is protected !!