September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

ವೇಣೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 29ರಂದು ಕುಕ್ಕೇಡಿಯಲ್ಲಿ ನಡೆದಿದೆ.

ಕುಕ್ಕೇಡಿ ಗ್ರಾಮದ ಗೋಳಿಯಂಗಡಿಬೊಳ್ಳಾಲು ಮನೆ ದಿ| ಅಣ್ಣಪ್ಪ ಮೂಲ್ಯರ ಪುತ್ರಿ ಶ್ರೀಮತಿ ಹರಿಣಾಕ್ಷಿ (35 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಶ್ರೀಮತಿ ಹರಿಣಾಕ್ಷಿ ಅವರನ್ನು ಸುಮಾರು 8 ವರ್ಷ ಹಿಂದೆ ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ನಾಗೇಶ ಬಂಗೇರ ಎಂಬವರಿಗೆ ಜಾತಿ ಸಂಪ್ರದಾಯದಂತೆ ಮದುವೆ ಮಾಡಿ ಕೊಡಲಾಗಿತ್ತು. ಗಂಡನ ಮನೆಯಲ್ಲಿ ಸಂಸಾರ ಮಾಡಿಕೊಂಡಿದ್ದ ಹರಿಣಾಕ್ಷಿಯವರು ಮದುವೆಯಾಗಿ ಸ್ವಲ್ಪ ಸಮಯದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿ, ಸಂಪೂರ್ಣ ಗುಣಮುಖರಾಗಿ ರಲಿಲ್ಲ. ಸುಮಾರು ಮೂರುವರೇ ತಿಂಗಳ ಹಿಂದೆ ಎರಡನೇ ಹೆರಿಗೆಯಾಗಿ ತವರು ಮನೆಯಲ್ಲಿ ಇದ್ದವರು ಸುಮಾರು 20 ದಿನ ಗಳ ಹಿಂದೆ ತನ್ನ ತಾಯಿ ಶ್ರೀಮತಿ ಮೋನಮ್ಮ ರವರೊಂದಿಗೆ ಗಂಡನ ಮನೆಗೆ ಹೋಗಿದ್ದರು.

ಸೆ.28 ರಂದು ಮಾನಸಿಕ ಖಿನ್ನತೆಗೆ ಒಳಪಟ್ಟವಳನ್ನು ಗಂಡನ ಮನೆಯಿಂದ ಕುಕ್ಕೆಡಿಯ ತಾಯಿ ಮನೆಗೆ ಕರೆದುಕೊಂಡು ಬಂದಿದ್ದರು. 29 ರಂದು ಬೆಳಗಿನ ಜಾವ ಹರಿಣಾಕ್ಷಿಯವರು ಮಾನಸಿಕ ಖಿನ್ನತೆಯಿಂದ ಎದ್ದು ಹೋಗಿ ತೋಟದ ಬಳಿಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವೇಣೂರು ಪೊಲೀಸ್ ಠಾಣೆಗೆ ಮೃತರ ಸಹೋದರ ಧನಂಜಯ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಬಂಟ್ವಾಳ : ಯುವತಿಯ ಹತ್ಯೆ ಪ್ರಕರಣದಲ್ಲಿ ಭಜರಂಗದಳದ ವಿರುದ್ಧ ಸುಳ್ಳು ಸುದ್ದಿ: ಭಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ದೂರು ದಾಖಲು

Suddi Udaya

ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ರಾಮ ಕ್ಷತ್ರಿಯ ಸಂಘದ 22ನೇ ವಾರ್ಷಿಕೋತ್ಸವ – ರಾಮಕ್ಷತ್ರಿಯ ಮಹಿಳಾ ವೃಂದದ ಉದ್ಘಾಟನೆ – ರಾಮಕ್ಷತ್ರಿಯ ಯುವ ವೇದಿಕೆಯ ಉದ್ಘಾಟನೆ – ಸಂಭ್ರಮದ “ಕ್ಷತ್ರಿಯ ಸಂಗಮ” ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವಾರ್ಪಣೆ

Suddi Udaya

ಚೊಚ್ಚಲ ಪ್ರಯತ್ನದಲ್ಲೇ ಗಮನ ಸೆಳೆದ ವಿದ್ವತ್ ನ NEET ಫಲಿತಾಂಶ: ಪ್ರತಿಷ್ಠಿತ AIIMS ಪ್ರವೇಶಾತಿಗೆ ಬೇಕಾದ ಅರ್ಹತೆ ಪಡೆದ ವಿದ್ಯಾರ್ಥಿಗಳು

Suddi Udaya

ನ್ಯಾಯತರ್ಪು: ಪಲ್ಲಾದೆ ಕೃಷಿಕ ನಾರಾಯಣ ಗೌಡ ನಿಧನ

Suddi Udaya

ರಾಷ್ಟ್ರೀಯ ಮಟ್ಟದ ತರಬೇತಿದಾರರ ತಂಡದಿಂದ ಧರ್ಮಸ್ಥಳದಲ್ಲಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರೊಂದಿಗೆ ಸಂವಾದ

Suddi Udaya
error: Content is protected !!