23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

ವೇಣೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 29ರಂದು ಕುಕ್ಕೇಡಿಯಲ್ಲಿ ನಡೆದಿದೆ.

ಕುಕ್ಕೇಡಿ ಗ್ರಾಮದ ಗೋಳಿಯಂಗಡಿಬೊಳ್ಳಾಲು ಮನೆ ದಿ| ಅಣ್ಣಪ್ಪ ಮೂಲ್ಯರ ಪುತ್ರಿ ಶ್ರೀಮತಿ ಹರಿಣಾಕ್ಷಿ (35 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಶ್ರೀಮತಿ ಹರಿಣಾಕ್ಷಿ ಅವರನ್ನು ಸುಮಾರು 8 ವರ್ಷ ಹಿಂದೆ ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ನಾಗೇಶ ಬಂಗೇರ ಎಂಬವರಿಗೆ ಜಾತಿ ಸಂಪ್ರದಾಯದಂತೆ ಮದುವೆ ಮಾಡಿ ಕೊಡಲಾಗಿತ್ತು. ಗಂಡನ ಮನೆಯಲ್ಲಿ ಸಂಸಾರ ಮಾಡಿಕೊಂಡಿದ್ದ ಹರಿಣಾಕ್ಷಿಯವರು ಮದುವೆಯಾಗಿ ಸ್ವಲ್ಪ ಸಮಯದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿ, ಸಂಪೂರ್ಣ ಗುಣಮುಖರಾಗಿ ರಲಿಲ್ಲ. ಸುಮಾರು ಮೂರುವರೇ ತಿಂಗಳ ಹಿಂದೆ ಎರಡನೇ ಹೆರಿಗೆಯಾಗಿ ತವರು ಮನೆಯಲ್ಲಿ ಇದ್ದವರು ಸುಮಾರು 20 ದಿನ ಗಳ ಹಿಂದೆ ತನ್ನ ತಾಯಿ ಶ್ರೀಮತಿ ಮೋನಮ್ಮ ರವರೊಂದಿಗೆ ಗಂಡನ ಮನೆಗೆ ಹೋಗಿದ್ದರು.

ಸೆ.28 ರಂದು ಮಾನಸಿಕ ಖಿನ್ನತೆಗೆ ಒಳಪಟ್ಟವಳನ್ನು ಗಂಡನ ಮನೆಯಿಂದ ಕುಕ್ಕೆಡಿಯ ತಾಯಿ ಮನೆಗೆ ಕರೆದುಕೊಂಡು ಬಂದಿದ್ದರು. 29 ರಂದು ಬೆಳಗಿನ ಜಾವ ಹರಿಣಾಕ್ಷಿಯವರು ಮಾನಸಿಕ ಖಿನ್ನತೆಯಿಂದ ಎದ್ದು ಹೋಗಿ ತೋಟದ ಬಳಿಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವೇಣೂರು ಪೊಲೀಸ್ ಠಾಣೆಗೆ ಮೃತರ ಸಹೋದರ ಧನಂಜಯ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಚಿನ್ನ / ನಿಧಿಯ ಹೆಸರಿನಲ್ಲಿ ನಿರಂತರ ಕರೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ದಾಖಲು

Suddi Udaya

ಮಾಜಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ರವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya

ಬೆಳ್ತಂಗಡಿ: ದ.ಕ. ಜಿಲ್ಲಾ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಮಹಾಸಭೆ

Suddi Udaya

ಉಜಿರೆ: ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಅಂಗವಾಗಿ ಸ್ವಚ್ಛತಾ ಅಭಿಯಾನ

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya
error: Content is protected !!