24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

ಕೊಕ್ಕಡ:ಕೊಕ್ಕಡ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ಅ.1 ರಂದು ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಂತೆ ಶ್ರಮದಾನ ನಡೆಸಲಾಯಿತು.

ಇದೇ ಸಂದರ್ಭದಲ್ಲಿ ಸ್ವಚ್ಛತಾ ಘಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಾದ ಶ್ರೀಮತಿ ವಿಮಲಾ, ಗೀತಾ, ಗಾಯತ್ರಿ ಹಾಗೂ ವಾಹನ ಚಾಲಕರಾದ ಕೇಶವ ಅವರನ್ನು ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಸನ್ಮಾನಿಸಲಾಯಿತು.

ಗ್ರಾಮದ ಜನರಿಗೆ ನೀಡುತ್ತಿರುವ ಸೇವೆಯನ್ನು ಗುರುತಿಸಿ ಜೇಸಿ ಅಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ ಅವರು ಶಾಲು, ಸ್ಮರಣಿಕೆ ಹಾಗೂ ನಗದು ಪುರಸ್ಕಾರ ನೀಡಿ ಅಭಿನಂದಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಸ್ವಚ್ಛತಾ ಪ್ರಮಾಣ ಬೋಧಿಸಿದರು. ಹೊಸದಾಗಿ ಪಂಚಾಯಿತಿಗೆ ಆಯ್ಕೆಯಾದ ಅಧ್ಯಕ್ಷರು ಬೇಬಿ, ಉಪಾಧ್ಯಕ್ಷರಾದ ಪ್ರಭಾಕರ ಗೌಡ ಅವರನ್ನು ಜೇಸಿ ವತಿಯಿಂದ ಅಭಿನಂದಿಸಲಾಯಿತು.

ಗ್ರಾಮ ಪಂಚಾಯಿತಿ ಸದಸ್ಯರಾದ ಯೋಗೀಶ್ ಆಲಂಬಿಲ, ಪವಿತ್ರ, ವಿಶ್ವನಾಥ ಕಕ್ಕುದೋಳೀ, ವನಜಾಕ್ಷಿ , ಜಗದೀಶ್, ಪ್ರಮೀಳಾ, ಪುರುಷೋತ್ತಮ, ಶರತ್, ವನಿತಾ, ಜಾನಕಿ, ಲತಾ, ಕಾರ್ಯದರ್ಶಿ , ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.ಶ್ರಮದಾನದಲ್ಲಿ ಜೇಸಿ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರಾದ ಕೆ. ಶ್ರೀಧರ್ ರಾವ್, ಕಾರ್ಯದರ್ಶಿ ವಿಕ್ಟರ್ ಸುವಾರಿಸ್, ಲೇಡಿ ಜೇಸಿ ವಿಭಾಗದ ಅಧ್ಯಕ್ಷರು ದೀಪಾ, ನರಸಿಂಹ ನಾಯಕ್, ಜೋಸೆಫ್ ಪಿರೇರಾ, ಜಸ್ವಂತ್ ಪಿರೇರಾ ಸಹಕರಿಸಿದರು.

Related posts

ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya

ಬಿಜೆಪಿ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಆಯ್ಕೆ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!