April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

ಕೊಕ್ಕಡ:ಕೊಕ್ಕಡ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ಅ.1 ರಂದು ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಂತೆ ಶ್ರಮದಾನ ನಡೆಸಲಾಯಿತು.

ಇದೇ ಸಂದರ್ಭದಲ್ಲಿ ಸ್ವಚ್ಛತಾ ಘಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಾದ ಶ್ರೀಮತಿ ವಿಮಲಾ, ಗೀತಾ, ಗಾಯತ್ರಿ ಹಾಗೂ ವಾಹನ ಚಾಲಕರಾದ ಕೇಶವ ಅವರನ್ನು ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಸನ್ಮಾನಿಸಲಾಯಿತು.

ಗ್ರಾಮದ ಜನರಿಗೆ ನೀಡುತ್ತಿರುವ ಸೇವೆಯನ್ನು ಗುರುತಿಸಿ ಜೇಸಿ ಅಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ ಅವರು ಶಾಲು, ಸ್ಮರಣಿಕೆ ಹಾಗೂ ನಗದು ಪುರಸ್ಕಾರ ನೀಡಿ ಅಭಿನಂದಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಸ್ವಚ್ಛತಾ ಪ್ರಮಾಣ ಬೋಧಿಸಿದರು. ಹೊಸದಾಗಿ ಪಂಚಾಯಿತಿಗೆ ಆಯ್ಕೆಯಾದ ಅಧ್ಯಕ್ಷರು ಬೇಬಿ, ಉಪಾಧ್ಯಕ್ಷರಾದ ಪ್ರಭಾಕರ ಗೌಡ ಅವರನ್ನು ಜೇಸಿ ವತಿಯಿಂದ ಅಭಿನಂದಿಸಲಾಯಿತು.

ಗ್ರಾಮ ಪಂಚಾಯಿತಿ ಸದಸ್ಯರಾದ ಯೋಗೀಶ್ ಆಲಂಬಿಲ, ಪವಿತ್ರ, ವಿಶ್ವನಾಥ ಕಕ್ಕುದೋಳೀ, ವನಜಾಕ್ಷಿ , ಜಗದೀಶ್, ಪ್ರಮೀಳಾ, ಪುರುಷೋತ್ತಮ, ಶರತ್, ವನಿತಾ, ಜಾನಕಿ, ಲತಾ, ಕಾರ್ಯದರ್ಶಿ , ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.ಶ್ರಮದಾನದಲ್ಲಿ ಜೇಸಿ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರಾದ ಕೆ. ಶ್ರೀಧರ್ ರಾವ್, ಕಾರ್ಯದರ್ಶಿ ವಿಕ್ಟರ್ ಸುವಾರಿಸ್, ಲೇಡಿ ಜೇಸಿ ವಿಭಾಗದ ಅಧ್ಯಕ್ಷರು ದೀಪಾ, ನರಸಿಂಹ ನಾಯಕ್, ಜೋಸೆಫ್ ಪಿರೇರಾ, ಜಸ್ವಂತ್ ಪಿರೇರಾ ಸಹಕರಿಸಿದರು.

Related posts

ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ರವರಿಗೆ ಐಐಬಿ ಬೆಸ್ಟ್ ಬುಸಿನೆಸ್ ಲೀಡರ್‌ಶಿಪ್ ಅವಾರ್ಡ್ -2023 ಪ್ರಶಸ್ತಿ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya
error: Content is protected !!