22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಸ್ವಚ್ಛತೆಯೇ ಸೇವೆ, ಶ್ರಮದಾನ, ಸಾಧಕರಿಗೆ ಸನ್ಮಾನ

ಕೊಕ್ಕಡ:ಕೊಕ್ಕಡ ಗ್ರಾಮ ಪಂಚಾಯಿತಿ ನೇತೃತ್ವದಲ್ಲಿ ಅ.1 ರಂದು ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಂತೆ ಶ್ರಮದಾನ ನಡೆಸಲಾಯಿತು.

ಇದೇ ಸಂದರ್ಭದಲ್ಲಿ ಸ್ವಚ್ಛತಾ ಘಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿಗಳಾದ ಶ್ರೀಮತಿ ವಿಮಲಾ, ಗೀತಾ, ಗಾಯತ್ರಿ ಹಾಗೂ ವಾಹನ ಚಾಲಕರಾದ ಕೇಶವ ಅವರನ್ನು ಜೇಸಿಐ ಕೊಕ್ಕಡ ಕಪಿಲಾ ವತಿಯಿಂದ ಸನ್ಮಾನಿಸಲಾಯಿತು.

ಗ್ರಾಮದ ಜನರಿಗೆ ನೀಡುತ್ತಿರುವ ಸೇವೆಯನ್ನು ಗುರುತಿಸಿ ಜೇಸಿ ಅಧ್ಯಕ್ಷರಾದ ಜಿತೇಶ್ ಎಲ್. ಪಿರೇರಾ ಅವರು ಶಾಲು, ಸ್ಮರಣಿಕೆ ಹಾಗೂ ನಗದು ಪುರಸ್ಕಾರ ನೀಡಿ ಅಭಿನಂದಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್ ಸ್ವಚ್ಛತಾ ಪ್ರಮಾಣ ಬೋಧಿಸಿದರು. ಹೊಸದಾಗಿ ಪಂಚಾಯಿತಿಗೆ ಆಯ್ಕೆಯಾದ ಅಧ್ಯಕ್ಷರು ಬೇಬಿ, ಉಪಾಧ್ಯಕ್ಷರಾದ ಪ್ರಭಾಕರ ಗೌಡ ಅವರನ್ನು ಜೇಸಿ ವತಿಯಿಂದ ಅಭಿನಂದಿಸಲಾಯಿತು.

ಗ್ರಾಮ ಪಂಚಾಯಿತಿ ಸದಸ್ಯರಾದ ಯೋಗೀಶ್ ಆಲಂಬಿಲ, ಪವಿತ್ರ, ವಿಶ್ವನಾಥ ಕಕ್ಕುದೋಳೀ, ವನಜಾಕ್ಷಿ , ಜಗದೀಶ್, ಪ್ರಮೀಳಾ, ಪುರುಷೋತ್ತಮ, ಶರತ್, ವನಿತಾ, ಜಾನಕಿ, ಲತಾ, ಕಾರ್ಯದರ್ಶಿ , ಸಿಬ್ಬಂದಿಗಳು, ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಿದ್ದರು.ಶ್ರಮದಾನದಲ್ಲಿ ಜೇಸಿ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರಾದ ಕೆ. ಶ್ರೀಧರ್ ರಾವ್, ಕಾರ್ಯದರ್ಶಿ ವಿಕ್ಟರ್ ಸುವಾರಿಸ್, ಲೇಡಿ ಜೇಸಿ ವಿಭಾಗದ ಅಧ್ಯಕ್ಷರು ದೀಪಾ, ನರಸಿಂಹ ನಾಯಕ್, ಜೋಸೆಫ್ ಪಿರೇರಾ, ಜಸ್ವಂತ್ ಪಿರೇರಾ ಸಹಕರಿಸಿದರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅಂಬಾರು: ಡಾ. ರವೀಶ್ ಪಡುಮಲೆರವರಿಗೆ ಗೌರವ ಸನ್ಮಾನ

Suddi Udaya

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ: ಕೊಲೆ ಆರೋಪಿಯ ಗುರುತು ಪತ್ತೆ ಹಚ್ಚಿದ ಪೊಲೀಸರು

Suddi Udaya

ನಾಳೆ (ಮಾ.1): ಕಕ್ಕಿಂಜೆ ವಿದ್ಯುತ್‌ ನಿಲುಗಡೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ಜಿಲ್ಲಾ ಚುನಾವಣಾ ಅಧಿಕಾರಿ ಮುಲೈ ಮುಗಿಲನ್ ಎಂಪಿ ರವರಿಂದ ಪ್ರಮಾಣ ಪತ್ರ ಸ್ವೀಕರಿಸಿದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ

Suddi Udaya
error: Content is protected !!