ತಾಲೂಕು ಸುದ್ದಿ

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

ಬೆಳ್ತಂಗಡಿ: ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್ ಪುತ್ತೂರು ಇದರ ಆಶ್ರಯದಲ್ಲಿ ಈ ವರ್ಷದ ಗಣೇಶೋತ್ಸವದ ಅಂಗವಾಗಿ ನಡೆದ ಬಣ್ಣದ ಗಜಮುಖ-23 ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆಯು ನೆಹರು ನಗರದ ಕಛೇರಿಯಲ್ಲಿ ನಡೆಯಿತು.
ಒಟ್ಟು43 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ವಿಜೇತರಿಗೆ ನೆನಪಿನ ಕಾಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಅದೇ ರೀತಿ ಭಾಗವಹಿಸಿದ ಪ್ರತಿ ಸದಸ್ಯರಿಗೆ ಅಭಿನಂದನ ಪತ್ರ ನೀಡುವ ಮೂಲಕ ಎಲ್ಲಾ ಸ್ಪರ್ಧಾಳುಗಳನ್ನು ಪ್ರೋತ್ಸಾಹಿಸಲಾಯಿತು.

ವಿಶೇಷವಾಗಿ 12 ಜನರಿಂದ ಆರಂಭಗೊಂಡ ಈ ಗ್ರೂಪ್,ಇದರ ಮೂಲಕ ಹಲವಾರು ‌ಸಮಾಜಮುಖಿ ಸಹಾಯ ‌ಹಸ್ತ ನೀಡುವ ಕೆಲಸ ನಡೆಯುತ್ತ ಬಂದಿದ್ದು ಯಾವುದೇ ರಾಜಕೀಯ ನಡೆಯಿಲ್ಲದೇ ನಾವೆಲ್ಲರೂ ಒಂದೇ ಎಂಬ ಧ್ಯೇಯದ‌ ಮೂಲಕ ಈ ತಂಡ‌ ಮುನ್ನಡೆಯುತ್ತಿದೆ.
ಈ ಸಂದರ್ಭದಲ್ಲಿ ಗ್ರೂಪ್ ನ ಸದಸ್ಯರಾದ ಮನ್ಮಥ ಶೆಟ್ಟಿ ಪುತ್ತೂರು, ಯೋಗೀಶ್ ಅಳಕೆ,ಪ್ರವೀಣ್ ಕೊಯಿಲ,ಪ್ರಸಾದ್ ಕೊಯಿಲ,ರಾಜೇಶ್ ಕುಲಾಲ್,ಪ್ರಕಾಶ್ ಮಿತ್ತೂರು,ದಾಮೋದರ ಪರಮಾರ್ , ಸುಪ್ರೀತ್ ಕೊಯಿಲ, ಶ್ರೀನಿಧಿ ಸುಳ್ಯ ಉಪಸ್ಥಿತರಿದ್ದರು

Related posts

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಪ್ರತಿಭಟನೆ

Suddi Udaya

ಗೇರುಕಟ್ಟೆ: ರೇಷ್ಮೆ ರೋಡ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!