24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದುವೆ ಸಮಾರಂಭದಲ್ಲಿ ಮಾದರಿ ಕಾರ್ಯ ವರನ ತಂದೆ ಮುಳುಗು ತಜ್ಞ ರಿಗೆ ಬಂಧು ಮಿತ್ರರಿಂದ ಸನ್ಮಾನ: ತನ್ನ ಪ್ರಾಯ ಲೆಕ್ಕಿಸದೆ ಇನ್ನೊಬ್ಬರ ಪ್ರಾಣ ರಕ್ಷಿಸುವ ಬಂದಾರು ಮಹಮ್ಮದರ ಸೇವೆ ಅನುಕರಣೀಯ :ಕೆ. ಎಂ.ಮುಸ್ತಫ

*ಬೆಳ್ತಂಗಡಿ ತಾಲೂಕಿನ ಬಂದಾರು ಮಹಮ್ಮದ್ ರವರು ಕಳೆದ 35 ವರ್ಷಗಳಿಂದ ವಿಪತ್ತು ಸಂಭವಿಸಿದಾಗ ಮುಳುಗು ತಜ್ಞರಾಗಿ, ಅಪಘಾತ ಸೇವೆ ಇನ್ನಿತರ ತುರ್ತು ಸಂದರ್ಭದಲ್ಲಿ ರಾತ್ರಿ ಹಗಲೆನ್ನದೆ ಧಾವಿಸುವವರು, ಈಗಲೂ ತನ್ನ 63 ವರ್ಷ ಪ್ರಾಯದಲ್ಲೂ ನೀರಿಗೆ ಧುಮುಕುವ ಸಾಹಸಿ, ಹಲವು ಜಿಲ್ಲಾ, ರಾಜ್ಯ ಪ್ರಶಸ್ತಿ ಪಡೆದಿರುವ ಬಂದಾರು ಮಹಮ್ಮದ್ ರಿಗೆ ಇಂದು ಮಗನ ಮದುವೆ ಸಂಭ್ರಮಗುರುವಾಯನಕೆರೆ ಶಾದಿಮಹಲ್ ನಲ್ಲಿ ಬಂದಾರು ಮಹಮ್ಮದ್ ರವರ ಪುತ್ರ ಅಬ್ದುಲ್ ಸಮದ್ ಎಂಬವರ ಮದುವೆ ಸಮಾರಂಭ, ಈ ಸಮಾರಂಭ ದಲ್ಲಿ ವಧು ಮತ್ತು ವರನ ಬಂಧು, ಮಿತ್ರಾದಿಗಳು, ಹಿತೈಷಿಗಳು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಮಾಜಕ್ಕೆ ಮಾದರಿ ಕಾರ್ಯ ಮಾಡಿ ಸಮುದಾಯಕ್ಕೆ ಕೀರ್ತಿ ತಂದ,ವರನ ತಂದೆ ಕುಟುಂಬದ ಯಜಮಾನ ಮಹಮ್ಮದ್ ಬಂದಾರು ರವರನ್ನು ಈ ಶುಭ ಕಾರ್ಯದಲ್ಲಿ ಸನ್ಮಾನ ಮಾಡಲಾಯಿತು

ಸನ್ಮಾನ ನೆರವೇರಿಸಿ ಮಾತನಾಡಿದ ದ. ಕ. ಮತ್ತು ಉಡುಪಿ ಜಿಲ್ಲೆಗಳ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಉಪಾಧ್ಯಕ್ಷ ಕೆ. ಎಂ. ಮುಸ್ತಫ ಸುಳ್ಯ ಮಾತನಾಡಿ ಬಂದಾರು ಮಹಮ್ಮದ್ ರವರು ಯಾವುದೇ ತುರ್ತು ಸಂದರ್ಭದಲ್ಲಿ ನೆರವಿಗೆ ಧಾವಿಸುವ ಸೇವೆ ಯುವಕರಿಗೆ ಆದರ್ಶ, ಜಾತಿ ಮತ ಭೇದವಿಲ್ಲದೆ ಮಾಡುವ ಇವರ ಮಾನವೀಯತೆಯ ಕೆಲಸ ಪ್ರವಾದಿ ಯವರ ಸಂದೇಶದ ಭಾಗ ಎಂದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಮಹಮ್ಮದ್ ರು ನೀರಕಟ್ಟೆ ಡ್ಯಾಮ್ ನಿಂದ ಮುನ್ಸೂಚನೆ ಇಲ್ಲದೆ ನೀರು ಬಿಟ್ಟ ಸಂದರ್ಭದಲ್ಲಿ ಹಾಯ್ ದೋಣಿಯಲ್ಲಿ ಬರುತ್ತಿದ್ದ ತಿಮ್ಮೆಗೌಡ ಎಂಬವರನ್ನು ಅಪಾಯ ಲೆಕ್ಕಿಸದೆ ನೀರಿಗೆ ಎತ್ತರದಿಂದ ಧಮುಕಿ ಪ್ರಾಣ ರಕ್ಷಿಸಿದ ಘಟನೆ ಇಂದಿಗೂ ನನ್ನನ್ನು ರೋಮಾಂಚನ ಗೊಳಿಸುತ್ತದೆ, ಎಂದರು. ಬ್ಯಾರಿ ಸಾಹಿತ್ಯ ಅಕಾಡೆಮಿಯ ರಾಜ್ಯ ಪ್ರಶಸ್ತಿ, ಕೇರಳದ ನಾಲೆಜ್ ಸಿಟಿ ಯಲ್ಲಿ ಜೀವ ರಕ್ಷಕ ಪ್ರಶಸ್ತಿ, ಸಹಿತ ಅನೇಕ ಸಂಘ ಸಂಸ್ಥೆಗಳು ಮಹಮ್ಮದ್ ರ ಸೇವೆಯನ್ನು ಗುರುತಿಸಿ ಗೌರವಿಸಿದೆ.

ಈ ಸಂದರ್ಭದಲ್ಲಿ ಕುಟುಂಬದ ಮುಖ್ಯಸ್ಥರುಗಳಾದ ಅಮ್ರಾಜ್ ಕಂಕನಾಡಿ, ಅಮೀರ್ ಅಹಸನ್ ಬಿಜೈ, ಹಾರಿಸ್ ನೆಟ್ಟಣ, ಮುಸ್ತಫ ಬುಡೋಲಿ, ಸಿದ್ದೀಕ್ ಮೆಟ್ರೋ ಸುಳ್ಯ, ಶಹೀರ್ ಕಲ್ಲಾಜೆ, ಮತ್ತಿತರರು ಉಪಸ್ಥಿತರಿದ್ದರು

Related posts

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya
error: Content is protected !!