25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

ವೇಣೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 29ರಂದು ಕುಕ್ಕೇಡಿಯಲ್ಲಿ ನಡೆದಿದೆ.

ಕುಕ್ಕೇಡಿ ಗ್ರಾಮದ ಗೋಳಿಯಂಗಡಿಬೊಳ್ಳಾಲು ಮನೆ ದಿ| ಅಣ್ಣಪ್ಪ ಮೂಲ್ಯರ ಪುತ್ರಿ ಶ್ರೀಮತಿ ಹರಿಣಾಕ್ಷಿ (35 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಶ್ರೀಮತಿ ಹರಿಣಾಕ್ಷಿ ಅವರನ್ನು ಸುಮಾರು 8 ವರ್ಷ ಹಿಂದೆ ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ನಾಗೇಶ ಬಂಗೇರ ಎಂಬವರಿಗೆ ಜಾತಿ ಸಂಪ್ರದಾಯದಂತೆ ಮದುವೆ ಮಾಡಿ ಕೊಡಲಾಗಿತ್ತು. ಗಂಡನ ಮನೆಯಲ್ಲಿ ಸಂಸಾರ ಮಾಡಿಕೊಂಡಿದ್ದ ಹರಿಣಾಕ್ಷಿಯವರು ಮದುವೆಯಾಗಿ ಸ್ವಲ್ಪ ಸಮಯದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿ, ಸಂಪೂರ್ಣ ಗುಣಮುಖರಾಗಿ ರಲಿಲ್ಲ. ಸುಮಾರು ಮೂರುವರೇ ತಿಂಗಳ ಹಿಂದೆ ಎರಡನೇ ಹೆರಿಗೆಯಾಗಿ ತವರು ಮನೆಯಲ್ಲಿ ಇದ್ದವರು ಸುಮಾರು 20 ದಿನ ಗಳ ಹಿಂದೆ ತನ್ನ ತಾಯಿ ಶ್ರೀಮತಿ ಮೋನಮ್ಮ ರವರೊಂದಿಗೆ ಗಂಡನ ಮನೆಗೆ ಹೋಗಿದ್ದರು.

ಸೆ.28 ರಂದು ಮಾನಸಿಕ ಖಿನ್ನತೆಗೆ ಒಳಪಟ್ಟವಳನ್ನು ಗಂಡನ ಮನೆಯಿಂದ ಕುಕ್ಕೆಡಿಯ ತಾಯಿ ಮನೆಗೆ ಕರೆದುಕೊಂಡು ಬಂದಿದ್ದರು. 29 ರಂದು ಬೆಳಗಿನ ಜಾವ ಹರಿಣಾಕ್ಷಿಯವರು ಮಾನಸಿಕ ಖಿನ್ನತೆಯಿಂದ ಎದ್ದು ಹೋಗಿ ತೋಟದ ಬಳಿಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವೇಣೂರು ಪೊಲೀಸ್ ಠಾಣೆಗೆ ಮೃತರ ಸಹೋದರ ಧನಂಜಯ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಗೀತೆಗಳ ಗಾಯನ ಕಾರ್ಯಾಗಾರ

Suddi Udaya

ಮಹಿಳಾ ಸಬಲೀಕರಣ ಕಾಯ೯ಕ್ರಮ: ಡಾ. ಹೇಮಾವತಿ ವಿ.ಹೆಗ್ಗಡೆಯವರಿಗೆ ಸಾಧನಾ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಲಾಯಿಲ ಗ್ರಾ.ಪಂ. ವತಿಯಿಂದ ಕರ್ನೋಡಿ ಹಾಗೂ ಪಡ್ಲಾಡಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ವಿತರಣೆ

Suddi Udaya

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya
error: Content is protected !!