37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

ವೇಣೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 29ರಂದು ಕುಕ್ಕೇಡಿಯಲ್ಲಿ ನಡೆದಿದೆ.

ಕುಕ್ಕೇಡಿ ಗ್ರಾಮದ ಗೋಳಿಯಂಗಡಿಬೊಳ್ಳಾಲು ಮನೆ ದಿ| ಅಣ್ಣಪ್ಪ ಮೂಲ್ಯರ ಪುತ್ರಿ ಶ್ರೀಮತಿ ಹರಿಣಾಕ್ಷಿ (35 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಶ್ರೀಮತಿ ಹರಿಣಾಕ್ಷಿ ಅವರನ್ನು ಸುಮಾರು 8 ವರ್ಷ ಹಿಂದೆ ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ನಾಗೇಶ ಬಂಗೇರ ಎಂಬವರಿಗೆ ಜಾತಿ ಸಂಪ್ರದಾಯದಂತೆ ಮದುವೆ ಮಾಡಿ ಕೊಡಲಾಗಿತ್ತು. ಗಂಡನ ಮನೆಯಲ್ಲಿ ಸಂಸಾರ ಮಾಡಿಕೊಂಡಿದ್ದ ಹರಿಣಾಕ್ಷಿಯವರು ಮದುವೆಯಾಗಿ ಸ್ವಲ್ಪ ಸಮಯದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿ, ಸಂಪೂರ್ಣ ಗುಣಮುಖರಾಗಿ ರಲಿಲ್ಲ. ಸುಮಾರು ಮೂರುವರೇ ತಿಂಗಳ ಹಿಂದೆ ಎರಡನೇ ಹೆರಿಗೆಯಾಗಿ ತವರು ಮನೆಯಲ್ಲಿ ಇದ್ದವರು ಸುಮಾರು 20 ದಿನ ಗಳ ಹಿಂದೆ ತನ್ನ ತಾಯಿ ಶ್ರೀಮತಿ ಮೋನಮ್ಮ ರವರೊಂದಿಗೆ ಗಂಡನ ಮನೆಗೆ ಹೋಗಿದ್ದರು.

ಸೆ.28 ರಂದು ಮಾನಸಿಕ ಖಿನ್ನತೆಗೆ ಒಳಪಟ್ಟವಳನ್ನು ಗಂಡನ ಮನೆಯಿಂದ ಕುಕ್ಕೆಡಿಯ ತಾಯಿ ಮನೆಗೆ ಕರೆದುಕೊಂಡು ಬಂದಿದ್ದರು. 29 ರಂದು ಬೆಳಗಿನ ಜಾವ ಹರಿಣಾಕ್ಷಿಯವರು ಮಾನಸಿಕ ಖಿನ್ನತೆಯಿಂದ ಎದ್ದು ಹೋಗಿ ತೋಟದ ಬಳಿಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವೇಣೂರು ಪೊಲೀಸ್ ಠಾಣೆಗೆ ಮೃತರ ಸಹೋದರ ಧನಂಜಯ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಉಜಿರೆ: ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಾಮೂಹಿಕ ಗೌರಿ ಪೂಜೆ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ :ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಳ್ಳತನ ಪ್ರಕರಣವನ್ನು ಪತ್ತೆಹಚ್ಚಲು ಪೊಲೀಸ್ ಇಲಾಖೆಯಲ್ಲಿ ಎಸ್.ಡಿ.ಪಿ.ಐ ಆಗ್ರಹ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ನಡ: ಕೇಲ್ತಾಜೆ ಸುರ್‍ಯ ರಸ್ತೆಗೆ ದಿ| ಸುಭಾಶ್ಚಂದ್ರ ಜೈನ್ ಸುರ್ಯಗುತ್ತು ಹೆಸರು ನಾಮಕರಣ ಮಾಡಲು ಪಿ.ಡಿ.ಒ ರವರಿಗೆ ಮನವಿ

Suddi Udaya
error: Content is protected !!