July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

ವೇಣೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 29ರಂದು ಕುಕ್ಕೇಡಿಯಲ್ಲಿ ನಡೆದಿದೆ.

ಕುಕ್ಕೇಡಿ ಗ್ರಾಮದ ಗೋಳಿಯಂಗಡಿಬೊಳ್ಳಾಲು ಮನೆ ದಿ| ಅಣ್ಣಪ್ಪ ಮೂಲ್ಯರ ಪುತ್ರಿ ಶ್ರೀಮತಿ ಹರಿಣಾಕ್ಷಿ (35 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಶ್ರೀಮತಿ ಹರಿಣಾಕ್ಷಿ ಅವರನ್ನು ಸುಮಾರು 8 ವರ್ಷ ಹಿಂದೆ ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ನಾಗೇಶ ಬಂಗೇರ ಎಂಬವರಿಗೆ ಜಾತಿ ಸಂಪ್ರದಾಯದಂತೆ ಮದುವೆ ಮಾಡಿ ಕೊಡಲಾಗಿತ್ತು. ಗಂಡನ ಮನೆಯಲ್ಲಿ ಸಂಸಾರ ಮಾಡಿಕೊಂಡಿದ್ದ ಹರಿಣಾಕ್ಷಿಯವರು ಮದುವೆಯಾಗಿ ಸ್ವಲ್ಪ ಸಮಯದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿ, ಸಂಪೂರ್ಣ ಗುಣಮುಖರಾಗಿ ರಲಿಲ್ಲ. ಸುಮಾರು ಮೂರುವರೇ ತಿಂಗಳ ಹಿಂದೆ ಎರಡನೇ ಹೆರಿಗೆಯಾಗಿ ತವರು ಮನೆಯಲ್ಲಿ ಇದ್ದವರು ಸುಮಾರು 20 ದಿನ ಗಳ ಹಿಂದೆ ತನ್ನ ತಾಯಿ ಶ್ರೀಮತಿ ಮೋನಮ್ಮ ರವರೊಂದಿಗೆ ಗಂಡನ ಮನೆಗೆ ಹೋಗಿದ್ದರು.

ಸೆ.28 ರಂದು ಮಾನಸಿಕ ಖಿನ್ನತೆಗೆ ಒಳಪಟ್ಟವಳನ್ನು ಗಂಡನ ಮನೆಯಿಂದ ಕುಕ್ಕೆಡಿಯ ತಾಯಿ ಮನೆಗೆ ಕರೆದುಕೊಂಡು ಬಂದಿದ್ದರು. 29 ರಂದು ಬೆಳಗಿನ ಜಾವ ಹರಿಣಾಕ್ಷಿಯವರು ಮಾನಸಿಕ ಖಿನ್ನತೆಯಿಂದ ಎದ್ದು ಹೋಗಿ ತೋಟದ ಬಳಿಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವೇಣೂರು ಪೊಲೀಸ್ ಠಾಣೆಗೆ ಮೃತರ ಸಹೋದರ ಧನಂಜಯ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಸುದ್ದಿ ಉದಯ ವಾರಪತ್ರಿಕೆ’ ನೇತೃತ್ವ ‘ಮುಳಿಯ ಸಂಸ್ಥೆ’ಯ ಪ್ರಾಯೋಜಕತ್ವ – ‘ರಾಧೆ-ಕೃಷ್ಣ’ ಫೋಟೋ ಸ್ಪರ್ಧಾ ವಿಜೇತ ಮಕ್ಕಳಿಗೆ ಬಹುಮಾನ ವಿತರಣೆ

Suddi Udaya

ಶಿಬಾಜೆ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿ ಮನೆಗೆ ಮೆಸ್ಕಾಂ ವಿಜಿಲೆನ್ಸ್ ಎ ಡಬ್ಲ್ಯೂ ಇ ಪ್ರವೀಣ್ ಹಾಗೂ ಮೆಸ್ಕಾಂ ವಿಜಿಲೆನ್ಸ್ ಪೊಲೀಸ್ ಭೇಟಿ

Suddi Udaya

ಗಾಂಜಾ ಸೇವನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya

ಪುದುವೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಎರಡನೇ ವರ್ಷದ ಶ್ರೀ ಗಣೇಶೋತ್ಸವ

Suddi Udaya

ಕಳಿಯ ಗ್ರಾ.ಪಂ. ಮಟ್ಟದ ವೈಷ್ಣವಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!