25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿ

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

ಬೆಳ್ತಂಗಡಿ: ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್ ಪುತ್ತೂರು ಇದರ ಆಶ್ರಯದಲ್ಲಿ ಈ ವರ್ಷದ ಗಣೇಶೋತ್ಸವದ ಅಂಗವಾಗಿ ನಡೆದ ಬಣ್ಣದ ಗಜಮುಖ-23 ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆಯು ನೆಹರು ನಗರದ ಕಛೇರಿಯಲ್ಲಿ ನಡೆಯಿತು.
ಒಟ್ಟು43 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ವಿಜೇತರಿಗೆ ನೆನಪಿನ ಕಾಣಿಕೆ ಮತ್ತು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಅದೇ ರೀತಿ ಭಾಗವಹಿಸಿದ ಪ್ರತಿ ಸದಸ್ಯರಿಗೆ ಅಭಿನಂದನ ಪತ್ರ ನೀಡುವ ಮೂಲಕ ಎಲ್ಲಾ ಸ್ಪರ್ಧಾಳುಗಳನ್ನು ಪ್ರೋತ್ಸಾಹಿಸಲಾಯಿತು.

ವಿಶೇಷವಾಗಿ 12 ಜನರಿಂದ ಆರಂಭಗೊಂಡ ಈ ಗ್ರೂಪ್,ಇದರ ಮೂಲಕ ಹಲವಾರು ‌ಸಮಾಜಮುಖಿ ಸಹಾಯ ‌ಹಸ್ತ ನೀಡುವ ಕೆಲಸ ನಡೆಯುತ್ತ ಬಂದಿದ್ದು ಯಾವುದೇ ರಾಜಕೀಯ ನಡೆಯಿಲ್ಲದೇ ನಾವೆಲ್ಲರೂ ಒಂದೇ ಎಂಬ ಧ್ಯೇಯದ‌ ಮೂಲಕ ಈ ತಂಡ‌ ಮುನ್ನಡೆಯುತ್ತಿದೆ.
ಈ ಸಂದರ್ಭದಲ್ಲಿ ಗ್ರೂಪ್ ನ ಸದಸ್ಯರಾದ ಮನ್ಮಥ ಶೆಟ್ಟಿ ಪುತ್ತೂರು, ಯೋಗೀಶ್ ಅಳಕೆ,ಪ್ರವೀಣ್ ಕೊಯಿಲ,ಪ್ರಸಾದ್ ಕೊಯಿಲ,ರಾಜೇಶ್ ಕುಲಾಲ್,ಪ್ರಕಾಶ್ ಮಿತ್ತೂರು,ದಾಮೋದರ ಪರಮಾರ್ , ಸುಪ್ರೀತ್ ಕೊಯಿಲ, ಶ್ರೀನಿಧಿ ಸುಳ್ಯ ಉಪಸ್ಥಿತರಿದ್ದರು

Related posts

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya

ಕೊಕ್ಕಡ: ಮಾಯಿಲಕೋಟೆ ಸೀಮೆ ದೈವಸ್ಥಾನದಲ್ಲಿ ನಾಗಪ್ರತಿಷ್ಠೆ, ಆಶ್ಲೇಷ ಬಲಿ

Suddi Udaya

ಕರ್ನಾಟಕ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಉಪ ಚುನಾವಣೆಗೆ ದಿನಾಂಕ ನಿಗದಿ: ವಿಧಾನ ಪರಿಷತ್ ಸದಸ್ಯರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾದ ಸ್ಥಾನ: ಸೆ. 26ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭ

Suddi Udaya

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

Suddi Udaya

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭ

Suddi Udaya
error: Content is protected !!