37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

ವೇಣೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 29ರಂದು ಕುಕ್ಕೇಡಿಯಲ್ಲಿ ನಡೆದಿದೆ.

ಕುಕ್ಕೇಡಿ ಗ್ರಾಮದ ಗೋಳಿಯಂಗಡಿಬೊಳ್ಳಾಲು ಮನೆ ದಿ| ಅಣ್ಣಪ್ಪ ಮೂಲ್ಯರ ಪುತ್ರಿ ಶ್ರೀಮತಿ ಹರಿಣಾಕ್ಷಿ (35 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಶ್ರೀಮತಿ ಹರಿಣಾಕ್ಷಿ ಅವರನ್ನು ಸುಮಾರು 8 ವರ್ಷ ಹಿಂದೆ ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ನಾಗೇಶ ಬಂಗೇರ ಎಂಬವರಿಗೆ ಜಾತಿ ಸಂಪ್ರದಾಯದಂತೆ ಮದುವೆ ಮಾಡಿ ಕೊಡಲಾಗಿತ್ತು. ಗಂಡನ ಮನೆಯಲ್ಲಿ ಸಂಸಾರ ಮಾಡಿಕೊಂಡಿದ್ದ ಹರಿಣಾಕ್ಷಿಯವರು ಮದುವೆಯಾಗಿ ಸ್ವಲ್ಪ ಸಮಯದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿ, ಸಂಪೂರ್ಣ ಗುಣಮುಖರಾಗಿ ರಲಿಲ್ಲ. ಸುಮಾರು ಮೂರುವರೇ ತಿಂಗಳ ಹಿಂದೆ ಎರಡನೇ ಹೆರಿಗೆಯಾಗಿ ತವರು ಮನೆಯಲ್ಲಿ ಇದ್ದವರು ಸುಮಾರು 20 ದಿನ ಗಳ ಹಿಂದೆ ತನ್ನ ತಾಯಿ ಶ್ರೀಮತಿ ಮೋನಮ್ಮ ರವರೊಂದಿಗೆ ಗಂಡನ ಮನೆಗೆ ಹೋಗಿದ್ದರು.

ಸೆ.28 ರಂದು ಮಾನಸಿಕ ಖಿನ್ನತೆಗೆ ಒಳಪಟ್ಟವಳನ್ನು ಗಂಡನ ಮನೆಯಿಂದ ಕುಕ್ಕೆಡಿಯ ತಾಯಿ ಮನೆಗೆ ಕರೆದುಕೊಂಡು ಬಂದಿದ್ದರು. 29 ರಂದು ಬೆಳಗಿನ ಜಾವ ಹರಿಣಾಕ್ಷಿಯವರು ಮಾನಸಿಕ ಖಿನ್ನತೆಯಿಂದ ಎದ್ದು ಹೋಗಿ ತೋಟದ ಬಳಿಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವೇಣೂರು ಪೊಲೀಸ್ ಠಾಣೆಗೆ ಮೃತರ ಸಹೋದರ ಧನಂಜಯ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಕಳೆಂಜ: ಪರಪ್ಪುಗುತ್ತು ಪಿ.ಎನ್. ರವಿರಾಜ್ ಬಂಗ ಮತ್ತು ನಾಗರತ್ನ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

Suddi Udaya

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಕಲ್ಮಂಜ: ಪುಟಾಣಿ ಮಕ್ಕಳ ನೂತನ ‘ಸದಾಶಿವೇಶ್ವರ’ ಭಜನಾ ತಂಡ ರಚನೆ

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya

ಬೆಳ್ತಂಗಡಿ: 12 ಅಡಿ ಉದ್ದದ ಕಾಳಿಂಗ ಸರ್ಪವನ್ನು ರಕ್ಷಿಸಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್ ಲಾಯಿಲ

Suddi Udaya
error: Content is protected !!