September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

ವೇಣೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 29ರಂದು ಕುಕ್ಕೇಡಿಯಲ್ಲಿ ನಡೆದಿದೆ.

ಕುಕ್ಕೇಡಿ ಗ್ರಾಮದ ಗೋಳಿಯಂಗಡಿಬೊಳ್ಳಾಲು ಮನೆ ದಿ| ಅಣ್ಣಪ್ಪ ಮೂಲ್ಯರ ಪುತ್ರಿ ಶ್ರೀಮತಿ ಹರಿಣಾಕ್ಷಿ (35 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಶ್ರೀಮತಿ ಹರಿಣಾಕ್ಷಿ ಅವರನ್ನು ಸುಮಾರು 8 ವರ್ಷ ಹಿಂದೆ ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ನಾಗೇಶ ಬಂಗೇರ ಎಂಬವರಿಗೆ ಜಾತಿ ಸಂಪ್ರದಾಯದಂತೆ ಮದುವೆ ಮಾಡಿ ಕೊಡಲಾಗಿತ್ತು. ಗಂಡನ ಮನೆಯಲ್ಲಿ ಸಂಸಾರ ಮಾಡಿಕೊಂಡಿದ್ದ ಹರಿಣಾಕ್ಷಿಯವರು ಮದುವೆಯಾಗಿ ಸ್ವಲ್ಪ ಸಮಯದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿ, ಸಂಪೂರ್ಣ ಗುಣಮುಖರಾಗಿ ರಲಿಲ್ಲ. ಸುಮಾರು ಮೂರುವರೇ ತಿಂಗಳ ಹಿಂದೆ ಎರಡನೇ ಹೆರಿಗೆಯಾಗಿ ತವರು ಮನೆಯಲ್ಲಿ ಇದ್ದವರು ಸುಮಾರು 20 ದಿನ ಗಳ ಹಿಂದೆ ತನ್ನ ತಾಯಿ ಶ್ರೀಮತಿ ಮೋನಮ್ಮ ರವರೊಂದಿಗೆ ಗಂಡನ ಮನೆಗೆ ಹೋಗಿದ್ದರು.

ಸೆ.28 ರಂದು ಮಾನಸಿಕ ಖಿನ್ನತೆಗೆ ಒಳಪಟ್ಟವಳನ್ನು ಗಂಡನ ಮನೆಯಿಂದ ಕುಕ್ಕೆಡಿಯ ತಾಯಿ ಮನೆಗೆ ಕರೆದುಕೊಂಡು ಬಂದಿದ್ದರು. 29 ರಂದು ಬೆಳಗಿನ ಜಾವ ಹರಿಣಾಕ್ಷಿಯವರು ಮಾನಸಿಕ ಖಿನ್ನತೆಯಿಂದ ಎದ್ದು ಹೋಗಿ ತೋಟದ ಬಳಿಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವೇಣೂರು ಪೊಲೀಸ್ ಠಾಣೆಗೆ ಮೃತರ ಸಹೋದರ ಧನಂಜಯ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya

ಮಚ್ಚಿನ : ಬಳ್ಳಮಂಜ ಗಣೇಶ್ ಬಾಳಿಗ ನಿಧನ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇದರ ಆಶ್ರಯದಲ್ಲಿ ತಾಲ್ಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ದೊಂಪದಪಲ್ಕೆ ಸ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಚಾರ್ಮಾಡಿ ಘಾಟಿ: ಅರಣ್ಯ ಇಲಾಖೆ ಗಸ್ತು

Suddi Udaya
error: Content is protected !!