July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆ ಕೆರೆಗೆ ಹಾರಿ ಆತ್ಮಹತ್ಯೆ

ವೇಣೂರು : ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ. 29ರಂದು ಕುಕ್ಕೇಡಿಯಲ್ಲಿ ನಡೆದಿದೆ.

ಕುಕ್ಕೇಡಿ ಗ್ರಾಮದ ಗೋಳಿಯಂಗಡಿಬೊಳ್ಳಾಲು ಮನೆ ದಿ| ಅಣ್ಣಪ್ಪ ಮೂಲ್ಯರ ಪುತ್ರಿ ಶ್ರೀಮತಿ ಹರಿಣಾಕ್ಷಿ (35 ವರ್ಷ) ಆತ್ಮಹತ್ಯೆ ಮಾಡಿಕೊಂಡವರು. ಶ್ರೀಮತಿ ಹರಿಣಾಕ್ಷಿ ಅವರನ್ನು ಸುಮಾರು 8 ವರ್ಷ ಹಿಂದೆ ಬಂಟ್ವಾಳ ತಾಲೂಕು ಬಂಟ್ವಾಳ ಕಸಬಾ ಗ್ರಾಮದ ನಾಗೇಶ ಬಂಗೇರ ಎಂಬವರಿಗೆ ಜಾತಿ ಸಂಪ್ರದಾಯದಂತೆ ಮದುವೆ ಮಾಡಿ ಕೊಡಲಾಗಿತ್ತು. ಗಂಡನ ಮನೆಯಲ್ಲಿ ಸಂಸಾರ ಮಾಡಿಕೊಂಡಿದ್ದ ಹರಿಣಾಕ್ಷಿಯವರು ಮದುವೆಯಾಗಿ ಸ್ವಲ್ಪ ಸಮಯದ ಬಳಿಕ ಮಾನಸಿಕ ಖಿನ್ನತೆಗೆ ಒಳಗಾಗಿ, ಸಂಪೂರ್ಣ ಗುಣಮುಖರಾಗಿ ರಲಿಲ್ಲ. ಸುಮಾರು ಮೂರುವರೇ ತಿಂಗಳ ಹಿಂದೆ ಎರಡನೇ ಹೆರಿಗೆಯಾಗಿ ತವರು ಮನೆಯಲ್ಲಿ ಇದ್ದವರು ಸುಮಾರು 20 ದಿನ ಗಳ ಹಿಂದೆ ತನ್ನ ತಾಯಿ ಶ್ರೀಮತಿ ಮೋನಮ್ಮ ರವರೊಂದಿಗೆ ಗಂಡನ ಮನೆಗೆ ಹೋಗಿದ್ದರು.

ಸೆ.28 ರಂದು ಮಾನಸಿಕ ಖಿನ್ನತೆಗೆ ಒಳಪಟ್ಟವಳನ್ನು ಗಂಡನ ಮನೆಯಿಂದ ಕುಕ್ಕೆಡಿಯ ತಾಯಿ ಮನೆಗೆ ಕರೆದುಕೊಂಡು ಬಂದಿದ್ದರು. 29 ರಂದು ಬೆಳಗಿನ ಜಾವ ಹರಿಣಾಕ್ಷಿಯವರು ಮಾನಸಿಕ ಖಿನ್ನತೆಯಿಂದ ಎದ್ದು ಹೋಗಿ ತೋಟದ ಬಳಿಯ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವೇಣೂರು ಪೊಲೀಸ್ ಠಾಣೆಗೆ ಮೃತರ ಸಹೋದರ ಧನಂಜಯ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

Related posts

ಕುತ್ಲೂರು: ಕಾಡಬಾಗಿಲು ನಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾದ ನವಚೇತನ ಆಂ.ಮಾ. ಶಾಲೆಯ ವಿದ್ಯಾರ್ಥಿ ಶರ್ವಿನ್ ಮೊನಿಸ್ ರವರನ್ನು ಸನ್ಮಾನಿಸಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಸೀನಿಯರ್ ನ್ಯಾಶನಲ್ ನೆಟ್ಬಾಲ್ ಪಂದ್ಯಾಟ : ಉಜಿರೆಯ ಎಸ್.ಡಿ.ಎಂ ವಿದ್ಯಾರ್ಥಿಗಳ ಸಾಧನೆ

Suddi Udaya

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಯಾವುದೇ ನೋಟೀಸು ನೀಡದೆ, ಕಾರಣವಿಲ್ಲದೆ ಏಕಾಏಕಿ ಗೃಹರಕ್ಷಕದಳದ ಘಟಕಾಧಿಕಾರಿಯನ್ನು ಬದಲಾವಣೆ ಮಾಡಿರುವುದು ಯಾವ ನ್ಯಾಯ: ನಾನು ಯಾವುದೇ ತಪ್ಪನ್ನು ಮಾಡಿಲ್ಲ, ಜಿಲ್ಲೆಯ ಆದೇಶವನ್ನು ದುರುಪಯೋಗ ಮಾಡಿಲ್ಲ 36 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನನಗೆ ನ್ಯಾಯ ಕೊಡಿ : ಜಯಾನಂದ ಲಾಯಿಲ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya
error: Content is protected !!