July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

ಕೊಕ್ಕಡ: ಜೇಸಿ ವಲಯ 15 ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರು ಜೇಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಅ.4ರಂದು ಅಧಿಕೃತ ಭೇಟಿ ನೀಡಲಿದ್ದಾರೆ.
ಸಂಜೆ 6.30ಕ್ಕೆ ಸಂತ ಜಾನರ ಶಾಲಾ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಅವರು ಕೊಕ್ಕಡ ಘಟಕದ ನೂತನ ವೆಬ್‌ಸೈಟ್ ಹಾಗೂ ಆಪ್ ಲೋಕಾರ್ಪಣೆ ಮಾಡಲಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದ ಕೌಕ್ರಾಡಿ ಚರ್ಚ್ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವಿಶಾಲಾಕ್ಷಿ ಬಿ, 108 ಆಂಬುಲೆನ್ಸ್ ಸಿಬ್ಬಂದಿ ವಿಲ್ಮಾ ಶ್ವೇತಾ ಸ್ಟೆಲ್ಲಾ, ಹಿರಿಯ ಸದಸ್ಯರಾದ ಯು.ನರಸಿಂಹ ನಾಯಕ್, ನಾಟಿ ವೈದ್ಯರಾದ ಕೆ. ವಸಂತ ಪೂಜಾರಿ ಅವರಿಗೆ ಸನ್ಮಾನ ನಡೆಯಲಿದೆ. ಸ್ಥಳೀಯ ಸಂತ ಜಾನರ ಹಿ.ಪ್ರಾ. ಶಾಲೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಆದ್ಯ, ಯೋಶಿತಾ, ವಿವಿಯನ್ ಸುವಾರಿಸ್, ಅಂಜನಾ, ರಿಷಿಕ್, ಮನಸ್ವಿ, ಕಿಶನ್, ಶ್ರವಣ್, ವೈಷ್ಣವ್, ಧನ್ಯಶ್ರೀ, ಆಕಾಶ್, ವೀಕ್ಷಾ, ಉಜ್ವಲ್, ರಾಯನ್, ಸಾಧನಾ, ನೇತೃಶ್ರೀ, ಚೈತ್ರೇಶ್, ಜಯ, ಪ್ರೆಸಿಲ್ಲಾ ಮಾನ್ಯಶ್ರೀ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು.

ಈ ಸಮಾರಂಭದಲ್ಲಿ ಜೇಸಿ ವಲಯ 15 ರ ಉಪಾಧ್ಯಕ್ಷರಾದ ಭರತ್ ಶೆಟ್ಟಿ, ವಲಯಾಧಿಕಾರಿ ಕಾರ್ತಿಕ್ ಬಿ. ಭಾಗವಹಿಸುವವರು. ಸಭೆಗೆ ಎಲ್ಲರಿಗೂ ಮುಕ್ತ ಸ್ವಾಗತವಿದೆ ಎಂದು ಕೊಕ್ಕಡ ಜೇಸಿಐ ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ತಿಳಿಸಿದ್ದಾರೆ.

Related posts

ಕೆಎಮ್ ಜೆ ಗುರುವಾಯನಕೆರೆ ಸರ್ಕಲ್ ವತಿಯಿಂದ ಮದ್ದಡ್ಕದಲ್ಲಿ ಈದ್ ಮಿಲಾದ್ ಸಂಗಮ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ

Suddi Udaya

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಜನಾರ್ದನ ಗೌಡ ಆಯ್ಕೆ

Suddi Udaya

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

Suddi Udaya

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya
error: Content is protected !!