September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

ಕೊಕ್ಕಡ: ಜೇಸಿ ವಲಯ 15 ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರು ಜೇಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಅ.4ರಂದು ಅಧಿಕೃತ ಭೇಟಿ ನೀಡಲಿದ್ದಾರೆ.
ಸಂಜೆ 6.30ಕ್ಕೆ ಸಂತ ಜಾನರ ಶಾಲಾ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಅವರು ಕೊಕ್ಕಡ ಘಟಕದ ನೂತನ ವೆಬ್‌ಸೈಟ್ ಹಾಗೂ ಆಪ್ ಲೋಕಾರ್ಪಣೆ ಮಾಡಲಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದ ಕೌಕ್ರಾಡಿ ಚರ್ಚ್ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವಿಶಾಲಾಕ್ಷಿ ಬಿ, 108 ಆಂಬುಲೆನ್ಸ್ ಸಿಬ್ಬಂದಿ ವಿಲ್ಮಾ ಶ್ವೇತಾ ಸ್ಟೆಲ್ಲಾ, ಹಿರಿಯ ಸದಸ್ಯರಾದ ಯು.ನರಸಿಂಹ ನಾಯಕ್, ನಾಟಿ ವೈದ್ಯರಾದ ಕೆ. ವಸಂತ ಪೂಜಾರಿ ಅವರಿಗೆ ಸನ್ಮಾನ ನಡೆಯಲಿದೆ. ಸ್ಥಳೀಯ ಸಂತ ಜಾನರ ಹಿ.ಪ್ರಾ. ಶಾಲೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಆದ್ಯ, ಯೋಶಿತಾ, ವಿವಿಯನ್ ಸುವಾರಿಸ್, ಅಂಜನಾ, ರಿಷಿಕ್, ಮನಸ್ವಿ, ಕಿಶನ್, ಶ್ರವಣ್, ವೈಷ್ಣವ್, ಧನ್ಯಶ್ರೀ, ಆಕಾಶ್, ವೀಕ್ಷಾ, ಉಜ್ವಲ್, ರಾಯನ್, ಸಾಧನಾ, ನೇತೃಶ್ರೀ, ಚೈತ್ರೇಶ್, ಜಯ, ಪ್ರೆಸಿಲ್ಲಾ ಮಾನ್ಯಶ್ರೀ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು.

ಈ ಸಮಾರಂಭದಲ್ಲಿ ಜೇಸಿ ವಲಯ 15 ರ ಉಪಾಧ್ಯಕ್ಷರಾದ ಭರತ್ ಶೆಟ್ಟಿ, ವಲಯಾಧಿಕಾರಿ ಕಾರ್ತಿಕ್ ಬಿ. ಭಾಗವಹಿಸುವವರು. ಸಭೆಗೆ ಎಲ್ಲರಿಗೂ ಮುಕ್ತ ಸ್ವಾಗತವಿದೆ ಎಂದು ಕೊಕ್ಕಡ ಜೇಸಿಐ ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ತಿಳಿಸಿದ್ದಾರೆ.

Related posts

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಜು.10-ಆ.20: ಕುಮುಟಾ ಕೋನಳ್ಳಿ ವನದುರ್ಗಾ ದೇಗುಲದಲ್ಲಿ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಚಾತುರ್ಮಾಸ್ಯ ವ್ರತ

Suddi Udaya

ಪಟ್ರಮೆಯಲ್ಲಿ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya

ಕುಮಟಾ ನೆರೆಪೀಡಿತ ಪ್ರದೇಶಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತುರ್ತು ನೆರವು

Suddi Udaya

ಬೆಳ್ತಂಗಡಿ ಬಿಜೆಪಿ ಪಕ್ಷದ ಕಚೇರಿಗೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ರಬ್ಬರ್ ಕೃಷಿಕರ ಸಮಸ್ಯೆ ಪರಿಹರಿಸುವಂತೆ ಶಾಸಕ ಹರೀಶ್ ಪೂಂಜ ಇವರಿಗೆ ಮನವಿ

Suddi Udaya
error: Content is protected !!