23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

ಕೊಕ್ಕಡ: ಜೇಸಿ ವಲಯ 15 ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರು ಜೇಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಅ.4ರಂದು ಅಧಿಕೃತ ಭೇಟಿ ನೀಡಲಿದ್ದಾರೆ.
ಸಂಜೆ 6.30ಕ್ಕೆ ಸಂತ ಜಾನರ ಶಾಲಾ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಅವರು ಕೊಕ್ಕಡ ಘಟಕದ ನೂತನ ವೆಬ್‌ಸೈಟ್ ಹಾಗೂ ಆಪ್ ಲೋಕಾರ್ಪಣೆ ಮಾಡಲಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದ ಕೌಕ್ರಾಡಿ ಚರ್ಚ್ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವಿಶಾಲಾಕ್ಷಿ ಬಿ, 108 ಆಂಬುಲೆನ್ಸ್ ಸಿಬ್ಬಂದಿ ವಿಲ್ಮಾ ಶ್ವೇತಾ ಸ್ಟೆಲ್ಲಾ, ಹಿರಿಯ ಸದಸ್ಯರಾದ ಯು.ನರಸಿಂಹ ನಾಯಕ್, ನಾಟಿ ವೈದ್ಯರಾದ ಕೆ. ವಸಂತ ಪೂಜಾರಿ ಅವರಿಗೆ ಸನ್ಮಾನ ನಡೆಯಲಿದೆ. ಸ್ಥಳೀಯ ಸಂತ ಜಾನರ ಹಿ.ಪ್ರಾ. ಶಾಲೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಆದ್ಯ, ಯೋಶಿತಾ, ವಿವಿಯನ್ ಸುವಾರಿಸ್, ಅಂಜನಾ, ರಿಷಿಕ್, ಮನಸ್ವಿ, ಕಿಶನ್, ಶ್ರವಣ್, ವೈಷ್ಣವ್, ಧನ್ಯಶ್ರೀ, ಆಕಾಶ್, ವೀಕ್ಷಾ, ಉಜ್ವಲ್, ರಾಯನ್, ಸಾಧನಾ, ನೇತೃಶ್ರೀ, ಚೈತ್ರೇಶ್, ಜಯ, ಪ್ರೆಸಿಲ್ಲಾ ಮಾನ್ಯಶ್ರೀ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು.

ಈ ಸಮಾರಂಭದಲ್ಲಿ ಜೇಸಿ ವಲಯ 15 ರ ಉಪಾಧ್ಯಕ್ಷರಾದ ಭರತ್ ಶೆಟ್ಟಿ, ವಲಯಾಧಿಕಾರಿ ಕಾರ್ತಿಕ್ ಬಿ. ಭಾಗವಹಿಸುವವರು. ಸಭೆಗೆ ಎಲ್ಲರಿಗೂ ಮುಕ್ತ ಸ್ವಾಗತವಿದೆ ಎಂದು ಕೊಕ್ಕಡ ಜೇಸಿಐ ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ತಿಳಿಸಿದ್ದಾರೆ.

Related posts

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ನಿಮ್ಮ ಮನೋಭಾವ ಒಳ್ಳೆಯದಾಗಿದ್ದರೆ ಕೌಶಲ್ಯಗಳ ಸದುಪಯೋಗ ಮಾಡಲು ಆಗುತ್ತದೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಗುರಿಪಳ್ಳ: ಸಂಜೀವ ಶೆಟ್ಟಿ ನಿಧನ

Suddi Udaya

ಬಿಜೆಪಿ ಕೊಕ್ಕಡ 237ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಶಶಿಕುಮಾರ್, ಕಾರ್ಯದರ್ಶಿಯಾಗಿ ಶ್ರೀಧರ್ ಆಯ್ಕೆ

Suddi Udaya

ಸುದೆಮುಗೇರು ಅಂಗನವಾಡಿಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ : 9‌ಮಂದಿ ಪೌರ‌ ಕಾರ್ಮಿಕರಿಗೆ ಗೌರವಾರ್ಪಣೆ – ದಾನಿಗಳಿಗೆ ಸನ್ಮಾನ

Suddi Udaya
error: Content is protected !!