25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜನ್ಮ ದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು.

ಸರ್ವಧರ್ಮ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಬಳಿಕ ಗಾಂಧೀಜಿ ಹಾಗೂ ಶಾಸ್ತ್ರಿಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿ ಗಾಂಧೀಜಿ ಅವರ ರಘುಪತಿ ರಾಘವ ರಾಜಾರಾಮ್ ಗೀತೆಯನ್ನು ಹಾಡಲಾಯಿತು. ಗಾಂಧೀಜಿ ಅವರ ಜೀವನ ಹಾಗೂ ತತ್ವ ಆದರ್ಶಗಳ ಬಗ್ಗೆ ಟಿ ಜಿ ಟಿ ಶಿಕ್ಷಕರಾದ ಸುರೇಶ್ ಅವರು ಮಾಹಿತಿ ನೀಡಿದರು. ಬಳಿಕ ಶಾಲಾವರಣವನ್ನು ಸ್ವಚ್ಛಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ದಾನಿಗಳು ಹಿರಿಯರಾದ ಗೋವಿಂದ ಭಟ್, ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಿರಾಜ್ ಚಿಲಿಂಬಿ, ಶಾಲಾ ಮುಖ್ಯೋಪಾಧ್ಯಾಯರಾದ ಭಾಸ್ಕರ್, ಶಿಕ್ಷಕ ವೃಂದ, ಅಕ್ಷರ ದಾಸೋಹ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ಪಡಂಗಡಿ ಗ್ರಾ.ಪಂ ವ್ಯಾಪ್ತಿಯ ಹಲ್ಲಂದೋಡಿ ಪರಿಸರದಲ್ಲಿ ಸರಕಾರಿ ಭೂಮಿ ಅತಿಕ್ರಮಣ ಆರೋಪ: ನ್ಯಾಯಕ್ಕಾಗಿ ಹಲ್ಲಂದೋಡಿ ಸಂತೋಷ್ ಶೆಟ್ಟಿಯವರಿಂದ ಗ್ರಾಮಕರಣಿಕರ ಕಚೇರಿ ಎದುರು ಧರಣಿ

Suddi Udaya

ಲಾಯಿಲ ವಿಮುಕ್ತಿ ಸ್ವ-ಸಹಾಯ ಸಂಘಗಳ ಟ್ರಸ್ಟ್ ನ ಬೆಳ್ಳಿ ಹಬ್ಬ – ಸಂಭ್ರಮ ಸಡಗರದಿಂದ ಆಚರಣೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮೆಥಮೆಟಿಕ್ಸ್ ಒಲೆಂಪಿಯಾಡ್; ರಿಷಿಕಾ ಎಂ ಉಜಿರೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬಿಜೆಪಿ ಯುವ ಮೋರ್ಚಾದ ನೇತೃತ್ವದಲ್ಲಿ ಶಾಸಕ ಹರೀಶ್ ಪೂಂಜ ಸಾರಥ್ಯದಲ್ಲಿ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೋಸೆ ಹಬ್ಬಕ್ಕೆ ಚಾಲನೆ

Suddi Udaya

ಕಳೆಂಜ: ನೆಕ್ಕಾರಾಜೆ ತಿಮ್ಮಪ್ಪ ಗೌಡ ನಾಪತ್ತೆ: ಶವ ಮನೆಯ ಸಮೀಪದ ತೋಡಿನಲ್ಲಿ ಪತ್ತೆ

Suddi Udaya
error: Content is protected !!