September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜನ್ಮ ದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು.

ಸರ್ವಧರ್ಮ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಬಳಿಕ ಗಾಂಧೀಜಿ ಹಾಗೂ ಶಾಸ್ತ್ರಿಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿ ಗಾಂಧೀಜಿ ಅವರ ರಘುಪತಿ ರಾಘವ ರಾಜಾರಾಮ್ ಗೀತೆಯನ್ನು ಹಾಡಲಾಯಿತು. ಗಾಂಧೀಜಿ ಅವರ ಜೀವನ ಹಾಗೂ ತತ್ವ ಆದರ್ಶಗಳ ಬಗ್ಗೆ ಟಿ ಜಿ ಟಿ ಶಿಕ್ಷಕರಾದ ಸುರೇಶ್ ಅವರು ಮಾಹಿತಿ ನೀಡಿದರು. ಬಳಿಕ ಶಾಲಾವರಣವನ್ನು ಸ್ವಚ್ಛಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ದಾನಿಗಳು ಹಿರಿಯರಾದ ಗೋವಿಂದ ಭಟ್, ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಿರಾಜ್ ಚಿಲಿಂಬಿ, ಶಾಲಾ ಮುಖ್ಯೋಪಾಧ್ಯಾಯರಾದ ಭಾಸ್ಕರ್, ಶಿಕ್ಷಕ ವೃಂದ, ಅಕ್ಷರ ದಾಸೋಹ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಮಾ.12: ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ, ಪಿಲಿಚಾಮುಂಡಿ ದೈವಸ್ಥಾನದ ದೈವಗಳ ಪ್ರತಿಷ್ಠಾ ಕಾರ್ಯಕ್ರಮ-ಆಮoತ್ರಣ ಪತ್ರಿಕೆ ಬಿಡುಗಡೆ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಕುಂಭಾಭಿಷೇಕ ಪೂರ್ವಭಾವಿಯಾಗಿ ಚಪ್ಪರ ಮೂಹೂರ್ತ

Suddi Udaya

ಬೆಳ್ತಂಗಡಿ: ತುಳುನಾಡ್ ಒಕ್ಕೂಟ ಸಂಘಟನೆಯ ಯುವ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ರೋಟರಿ ಭವನದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ತರಬೇತಿ

Suddi Udaya
error: Content is protected !!