September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ ಕಾರ್ಯಕ್ರಮ ಸಂಘದ ಸಭಾಂಗಣದಲ್ಲಿ ಅ.1 ರಂದು ನಡೆಯಿತು.

ಸಂಘದ ಅಧ್ಯಕ್ಷರಾದ ರಾಜೇಶ್ ಗೌಡ ಪಾರ್ಲರವರು ಸಭಾಧ್ಯಕ್ಷತೆಯನ್ನು ವಹಿಸಿದರು, ಸಂಘದ ಕಾರ್ಯದರ್ಶಿ ಮಹಮ್ಮದ್ ಆದರ್ಶನಗರ ವರದಿ ವಾಚಿಸಿ, ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಕಿರಣ್ ಈರೆಂತ್ಯಾರ್ ರವರು ಲೆಕ್ಕಪತ್ರ ಮಂಡಿಸಿದರು.

ಕಾರ್ಯಕ್ರಮದಲ್ಲಿ ಗೌರವ ಸಲಹೆಗಾರರಾದ ಕೇಶವ ಪಿ ಬೆಳಾಲು ವಕೀಲರು ಹಾಗೂ ರಮೇಶ್ ಟೈಲರ್ ರವರು ಸಂಘವು ನಡೆದು ಬಂದ ಹಾದಿಯ ಬಗ್ಗೆ ಮೆಲುಕು ಹಾಕಿ, ಸಂಘವು ಸಮಾಜದಲ್ಲಿ ಇನ್ನಸ್ಟು ಸಮಾಜಮುಖಿ ಉತ್ತಮ ಕಾರ್ಯದಲ್ಲಿ ಬೆಳಗಲಿ ಎಂದು ಶುಭ ಹಾರೈಸಿದರು.


ಮುಂದಿನ ಎರಡು ವರ್ಷದ ಅವಧಿಗೆ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ನಿತಿನ್ ಮೋನಿಸ್,ಕಾರ್ಯದರ್ಶಿಯಾಗಿ ವಿಘ್ನೇಶ್ ಮುಂಡೆತ್ಯಾರ್, ಉಪಾಧ್ಯಕ್ಷರಾಗಿ ಆಸೀಫ್ ಮುಂಡೆತ್ಯಾರ್,ಜತೆ ಕಾರ್ಯದರ್ಶಿಯಾಗಿ ನವನೀತ್ ಗೌಡ ಮತ್ತು ಕೋಶಾಧಿಕಾರಿ ಯಾಗಿ ಕಿರಣ್ ಈರೆಂತ್ಯಾರ್, ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ರಾಧೇಶ್ ಆದರ್ಶನಗರ,ಕೇಶವ ಆದರ್ಶ ನಗರ, ಸುರೇಶ್ ಇಂದಲ್ಕೆ, ಶಾಹಿದ್ ಆದರ್ಶ ನಗರ,ಮಹಮ್ಮದ್ ಆದರ್ಶ ನಗರ,ಯತಿರಾಜ್ ಮೊಕ್ಕರ್ಜಾಲ್ ಇವರು ಅವಿರೋಧವಾಗಿ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ರಾಜೇಶ್ ಪಾರಳ ಇವರನ್ನು ನೇಮಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಘದ ಗೌರವ ಸಲಹೆಗಾರರಾದ ನವೀನ್ ಮೋನಿಸ್, ಕೇಶವ ಟೈಲರ್, ಚಂದ್ರಹಾಸ ಪಾರಳ, ಹರೀಶ್ ದರ್ಖಾಸು, ದಿನೇಶ್ ದರ್ಖಾಸು, ಶ್ಯಾಮರಾಯ ಆಚಾರ್ಯರವರು ಉಪಸ್ಥಿತರಿದ್ದರು, ಸಂಘದ ಸದಸ್ಯರು ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಗೌರವಾಧ್ಯಕ್ಷರಾದ ಪ್ರವೀಣ್ ವಿಜಯ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು, ಸಂಘದ ಗೌರವ ಸಲಹೆಗಾರರಾದ ಶ್ರೀನಿವಾಸ್ ಗೌಡ ನೋಟರಿ ವಕೀಲರು ಕಾರ್ಯಕ್ರಮ ನಿರೂಪಿಸಿ, ಗೌರವ ಸಲಹೆಗಾರರಾದ ಅನಿಲ್ ಪ್ರಕಾಶ್ ರವರು ವಂದಿಸಿದರು.

Related posts

ಕನ್ಯಾಡಿ ಸುಮತಿ ಎಸ್. ಜೈನ್ ನಿಧನ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಸುಲ್ಕೇರಿ: ಎಸ್.ಡಿ.ಎಂ ಸ್ನಾತಕೋತ್ತರ ಪದವಿ ಕೇಂದ್ರ ಮತ್ತು ಗ್ರಾ.ಪಂ ವತಿಯಿಂದ ಗ್ರಾಮ‌ ಸಮೀಕ್ಷೆ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ನವಚೇತನ ಶಾಲೆಯ ದ್ವಿಗುಣ ಸಾಧನೆ

Suddi Udaya

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಇಂದು (ಸೆ.25): ಬೆಳ್ತಂಗಡಿಯಲ್ಲಿ ಅರಿಹಂತ್ ಜೈನ್ ಮಾಲೀಕತ್ವದ ಅಯಾನ್ಶ್ ಮೊಬೈಲ್ ಮಳಿಗೆ ನವೀಕರಣಗೊಂಡು ಶುಭಾರಂಭ

Suddi Udaya
error: Content is protected !!