July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

ಬೆಳಾಲು: ಮೈತ್ರಿ ಯುವಕ ಮಂಡಲ (ರಿ.) ಬೆಳಾಲು ಇದರ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ ಕಾರ್ಯಕ್ರಮ ಸಂಘದ ಸಭಾಂಗಣದಲ್ಲಿ ಅ.1 ರಂದು ನಡೆಯಿತು.

ಸಂಘದ ಅಧ್ಯಕ್ಷರಾದ ರಾಜೇಶ್ ಗೌಡ ಪಾರ್ಲರವರು ಸಭಾಧ್ಯಕ್ಷತೆಯನ್ನು ವಹಿಸಿದರು, ಸಂಘದ ಕಾರ್ಯದರ್ಶಿ ಮಹಮ್ಮದ್ ಆದರ್ಶನಗರ ವರದಿ ವಾಚಿಸಿ, ಕಾರ್ಯಕಾರಿಣಿ ಸಮಿತಿ ಸದಸ್ಯರಾದ ಕಿರಣ್ ಈರೆಂತ್ಯಾರ್ ರವರು ಲೆಕ್ಕಪತ್ರ ಮಂಡಿಸಿದರು.

ಕಾರ್ಯಕ್ರಮದಲ್ಲಿ ಗೌರವ ಸಲಹೆಗಾರರಾದ ಕೇಶವ ಪಿ ಬೆಳಾಲು ವಕೀಲರು ಹಾಗೂ ರಮೇಶ್ ಟೈಲರ್ ರವರು ಸಂಘವು ನಡೆದು ಬಂದ ಹಾದಿಯ ಬಗ್ಗೆ ಮೆಲುಕು ಹಾಕಿ, ಸಂಘವು ಸಮಾಜದಲ್ಲಿ ಇನ್ನಸ್ಟು ಸಮಾಜಮುಖಿ ಉತ್ತಮ ಕಾರ್ಯದಲ್ಲಿ ಬೆಳಗಲಿ ಎಂದು ಶುಭ ಹಾರೈಸಿದರು.


ಮುಂದಿನ ಎರಡು ವರ್ಷದ ಅವಧಿಗೆ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ನಿತಿನ್ ಮೋನಿಸ್,ಕಾರ್ಯದರ್ಶಿಯಾಗಿ ವಿಘ್ನೇಶ್ ಮುಂಡೆತ್ಯಾರ್, ಉಪಾಧ್ಯಕ್ಷರಾಗಿ ಆಸೀಫ್ ಮುಂಡೆತ್ಯಾರ್,ಜತೆ ಕಾರ್ಯದರ್ಶಿಯಾಗಿ ನವನೀತ್ ಗೌಡ ಮತ್ತು ಕೋಶಾಧಿಕಾರಿ ಯಾಗಿ ಕಿರಣ್ ಈರೆಂತ್ಯಾರ್, ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ರಾಧೇಶ್ ಆದರ್ಶನಗರ,ಕೇಶವ ಆದರ್ಶ ನಗರ, ಸುರೇಶ್ ಇಂದಲ್ಕೆ, ಶಾಹಿದ್ ಆದರ್ಶ ನಗರ,ಮಹಮ್ಮದ್ ಆದರ್ಶ ನಗರ,ಯತಿರಾಜ್ ಮೊಕ್ಕರ್ಜಾಲ್ ಇವರು ಅವಿರೋಧವಾಗಿ ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ರಾಜೇಶ್ ಪಾರಳ ಇವರನ್ನು ನೇಮಿಸಲಾಯಿತು.


ಕಾರ್ಯಕ್ರಮದಲ್ಲಿ ಸಂಘದ ಗೌರವ ಸಲಹೆಗಾರರಾದ ನವೀನ್ ಮೋನಿಸ್, ಕೇಶವ ಟೈಲರ್, ಚಂದ್ರಹಾಸ ಪಾರಳ, ಹರೀಶ್ ದರ್ಖಾಸು, ದಿನೇಶ್ ದರ್ಖಾಸು, ಶ್ಯಾಮರಾಯ ಆಚಾರ್ಯರವರು ಉಪಸ್ಥಿತರಿದ್ದರು, ಸಂಘದ ಸದಸ್ಯರು ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಗೌರವಾಧ್ಯಕ್ಷರಾದ ಪ್ರವೀಣ್ ವಿಜಯ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು, ಸಂಘದ ಗೌರವ ಸಲಹೆಗಾರರಾದ ಶ್ರೀನಿವಾಸ್ ಗೌಡ ನೋಟರಿ ವಕೀಲರು ಕಾರ್ಯಕ್ರಮ ನಿರೂಪಿಸಿ, ಗೌರವ ಸಲಹೆಗಾರರಾದ ಅನಿಲ್ ಪ್ರಕಾಶ್ ರವರು ವಂದಿಸಿದರು.

Related posts

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ಗುರುವಾಯನಕೆರೆ ಹಝ್ರತ್ ಶೈಖ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಮತ್ತು ಜುಮ್ಮಾ ಮಸ್ಜಿದ್ ಆಡಳಿತ ಮಂಡಳಿಗೆ ಆಯ್ಕೆ

Suddi Udaya

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಮುಸ್ಲಿಮ್ ಮುಖಂಡರಿಂದ ಶಾಹುಲ್ ಹಮೀದ್ ಕೆ.ಕೆ. ನೇತೃತ್ವದಲ್ಲಿ ಸಚಿವ ಝಮೀರ್ ಅಹ್ಮದ್ ಭೇಟಿ

Suddi Udaya
error: Content is protected !!