27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಕಳೆಂಜ: ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ, ಪಾದೆ ಅಂಗನವಾಡಿ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಶಿಬರಾಜೆ, ಪಾದೆ ಹಾಗೂ ಜೆಸಿಐ ಕೊಕ್ಕಡ, ಕಪಿಲಾ ಘಟಕ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಅ.1 ರಂದು ನಡೆಯಿತು.


ಕಳೆಂಜ ಗ್ರಾ.ಪಂ. ಸದಸ್ಯ ನಿತ್ಯಾನಂದ ರೈ ಸ್ವಚ್ಛತಾ ಹಿ ಸೇವಾ ಪ್ರತಿಜ್ಞಾ ವಿಧಿಯನ್ನು ವಾಚಿಸಿದರು. ನಂತರ ಶಿಬರಾಜೆ, ಪಾದೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಮಾಡಲಾಯಿತು.


ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಪ್ರತಿಮಾ ನಾರಾಯಣ, ಸದಸ್ಯರುಗಳಾದ ಜಯವರ್ಮ ಜೈನ್, ಸೆವ್ರಿನ್ ಲಕ್ಷ್ಮೀ ನಾರಾಯಣ, ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಟಿ. ಸೆಬಾಸ್ಟಿನ್, ಜೆಸಿಐ ಸದಸ್ಯರಾದ ಸಂತೋಷ್ ಜೈನ್, ಅಕ್ಷತ್ ರೈ, ಅರಣ್ಯ ಸಮಿತಿಯ ಅಧ್ಯಕ್ಷ ಧನಂಜಯ ಗೌಡ, ಕಳೆಂಜ ಗ್ರಾ.ಪಂ. ಸದಸ್ಯೆ ಪ್ರೇಮಾ ಬಿ.ಎಸ್. ಕಳೆಂಜ ಸಿ.ಎ. ಬ್ಯಾಂಕ್ ನಿರ್ದೇಶಕ ರಾಜೇಶ್, ಸಂಜೀವಿನಿ ಕೃಷಿ ಸಖಿ ಸುಮಿತ್ರಾ, ಹೊನ್ನಪ್ಪ ಗೌಡ, ರಾಘವ ಗೌಡ ಬಲ್ಕಾಜೆ, ಧನುಷ್, ಧನ್ಯಾ, ಬಾಬು ರೈ, ನಾರಾಯಣ ಮಾರ್ತಾಡಿ, ಅಶ್ವಥ್, ಅಮೃತ್, ಮಕ್ಕಳು ಉಪಸ್ಥಿತರಿದ್ದರು.


ಅಕ್ಷತ್ ರೈ ಸಿಹಿತಿಂಡಿ ವಿತರಿಸಿದರು. ಅಂಗನವಾಡಿ ಕಾರ್ಯಕರ್ತೆ ಪ್ರಿಯಾ ಸ್ವಾಗತಿಸಿದರು. ಅಂಗನವಾಡಿ ಸಹಾಯಕಿ ಅನ್ಸಿಲ್ಲಾ ವಂದಿಸಿದರು.

Related posts

ಜ.17,18: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಪ್ರವರ್ಧಿತ ಆರ್ಥಿಕತೆಯಲ್ಲಿ ಗ್ರಾಮೀಣ ಉದ್ಯಮಶೀಲತೆಯ ಪಾತ್ರ’ ಕುರಿತು ಅಂತರರಾಷ್ಟ್ರೀಯ ವಿಚಾರ ಸಂಕಿರಣ ‘

Suddi Udaya

ಕಡಮಗುಂಡಿ, ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸಿ ತಾಣಗಳಿಗೆ ಹೇರಿದ್ದ ನಿರ್ಬಂಧ ನಾಳೆಯಿಂದ (ಜ.9) ತೆರೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ವೀಲ್ ಚಯರ್ ನಲ್ಲಿ ಬಂದು 88 ವರ್ಷದ ಅಜ್ಜಿ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya

ಶ್ರೀ ಕ್ಷೇತ್ರ ಶಾಂತಿವನ ಟ್ರಸ್ಟ್ ಮತ್ತು ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಪ್ರಶಾಂತ್ ಶೆಟ್ಟಿ ರವರಿಗೆ ಅಭಿನಂದನೆ

Suddi Udaya
error: Content is protected !!