22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಕಳೆಂಜ: ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ, ಪಾದೆ ಅಂಗನವಾಡಿ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಶಿಬರಾಜೆ, ಪಾದೆ ಹಾಗೂ ಜೆಸಿಐ ಕೊಕ್ಕಡ, ಕಪಿಲಾ ಘಟಕ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಅ.1 ರಂದು ನಡೆಯಿತು.


ಕಳೆಂಜ ಗ್ರಾ.ಪಂ. ಸದಸ್ಯ ನಿತ್ಯಾನಂದ ರೈ ಸ್ವಚ್ಛತಾ ಹಿ ಸೇವಾ ಪ್ರತಿಜ್ಞಾ ವಿಧಿಯನ್ನು ವಾಚಿಸಿದರು. ನಂತರ ಶಿಬರಾಜೆ, ಪಾದೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಮಾಡಲಾಯಿತು.


ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಪ್ರತಿಮಾ ನಾರಾಯಣ, ಸದಸ್ಯರುಗಳಾದ ಜಯವರ್ಮ ಜೈನ್, ಸೆವ್ರಿನ್ ಲಕ್ಷ್ಮೀ ನಾರಾಯಣ, ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಟಿ. ಸೆಬಾಸ್ಟಿನ್, ಜೆಸಿಐ ಸದಸ್ಯರಾದ ಸಂತೋಷ್ ಜೈನ್, ಅಕ್ಷತ್ ರೈ, ಅರಣ್ಯ ಸಮಿತಿಯ ಅಧ್ಯಕ್ಷ ಧನಂಜಯ ಗೌಡ, ಕಳೆಂಜ ಗ್ರಾ.ಪಂ. ಸದಸ್ಯೆ ಪ್ರೇಮಾ ಬಿ.ಎಸ್. ಕಳೆಂಜ ಸಿ.ಎ. ಬ್ಯಾಂಕ್ ನಿರ್ದೇಶಕ ರಾಜೇಶ್, ಸಂಜೀವಿನಿ ಕೃಷಿ ಸಖಿ ಸುಮಿತ್ರಾ, ಹೊನ್ನಪ್ಪ ಗೌಡ, ರಾಘವ ಗೌಡ ಬಲ್ಕಾಜೆ, ಧನುಷ್, ಧನ್ಯಾ, ಬಾಬು ರೈ, ನಾರಾಯಣ ಮಾರ್ತಾಡಿ, ಅಶ್ವಥ್, ಅಮೃತ್, ಮಕ್ಕಳು ಉಪಸ್ಥಿತರಿದ್ದರು.


ಅಕ್ಷತ್ ರೈ ಸಿಹಿತಿಂಡಿ ವಿತರಿಸಿದರು. ಅಂಗನವಾಡಿ ಕಾರ್ಯಕರ್ತೆ ಪ್ರಿಯಾ ಸ್ವಾಗತಿಸಿದರು. ಅಂಗನವಾಡಿ ಸಹಾಯಕಿ ಅನ್ಸಿಲ್ಲಾ ವಂದಿಸಿದರು.

Related posts

ವೇಣೂರು: ಜಯಶೀಲಾ ಪೈ ನಿಧನ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya

ಧರ್ಮಸ್ಥಳ: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪಡ್ಯಾರಬೆಟ್ಟು ಕ್ಷೇತ್ರಕ್ಕೆ ಬೇಟಿ ನೀಡಿದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಾರ್ಷಿಕೋತ್ಸವ

Suddi Udaya
error: Content is protected !!