25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಕಳೆಂಜ: ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ, ಪಾದೆ ಅಂಗನವಾಡಿ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಶಿಬರಾಜೆ, ಪಾದೆ ಹಾಗೂ ಜೆಸಿಐ ಕೊಕ್ಕಡ, ಕಪಿಲಾ ಘಟಕ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಅ.1 ರಂದು ನಡೆಯಿತು.


ಕಳೆಂಜ ಗ್ರಾ.ಪಂ. ಸದಸ್ಯ ನಿತ್ಯಾನಂದ ರೈ ಸ್ವಚ್ಛತಾ ಹಿ ಸೇವಾ ಪ್ರತಿಜ್ಞಾ ವಿಧಿಯನ್ನು ವಾಚಿಸಿದರು. ನಂತರ ಶಿಬರಾಜೆ, ಪಾದೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಮಾಡಲಾಯಿತು.


ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಪ್ರತಿಮಾ ನಾರಾಯಣ, ಸದಸ್ಯರುಗಳಾದ ಜಯವರ್ಮ ಜೈನ್, ಸೆವ್ರಿನ್ ಲಕ್ಷ್ಮೀ ನಾರಾಯಣ, ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಟಿ. ಸೆಬಾಸ್ಟಿನ್, ಜೆಸಿಐ ಸದಸ್ಯರಾದ ಸಂತೋಷ್ ಜೈನ್, ಅಕ್ಷತ್ ರೈ, ಅರಣ್ಯ ಸಮಿತಿಯ ಅಧ್ಯಕ್ಷ ಧನಂಜಯ ಗೌಡ, ಕಳೆಂಜ ಗ್ರಾ.ಪಂ. ಸದಸ್ಯೆ ಪ್ರೇಮಾ ಬಿ.ಎಸ್. ಕಳೆಂಜ ಸಿ.ಎ. ಬ್ಯಾಂಕ್ ನಿರ್ದೇಶಕ ರಾಜೇಶ್, ಸಂಜೀವಿನಿ ಕೃಷಿ ಸಖಿ ಸುಮಿತ್ರಾ, ಹೊನ್ನಪ್ಪ ಗೌಡ, ರಾಘವ ಗೌಡ ಬಲ್ಕಾಜೆ, ಧನುಷ್, ಧನ್ಯಾ, ಬಾಬು ರೈ, ನಾರಾಯಣ ಮಾರ್ತಾಡಿ, ಅಶ್ವಥ್, ಅಮೃತ್, ಮಕ್ಕಳು ಉಪಸ್ಥಿತರಿದ್ದರು.


ಅಕ್ಷತ್ ರೈ ಸಿಹಿತಿಂಡಿ ವಿತರಿಸಿದರು. ಅಂಗನವಾಡಿ ಕಾರ್ಯಕರ್ತೆ ಪ್ರಿಯಾ ಸ್ವಾಗತಿಸಿದರು. ಅಂಗನವಾಡಿ ಸಹಾಯಕಿ ಅನ್ಸಿಲ್ಲಾ ವಂದಿಸಿದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ಚುನಾವಣಾ ಸಾಕ್ಷರತಾ ಸಂಘದಿಂದ ‘ಮಾಕ್ ಪಾರ್ಲಿಮೆಂಟ್’ ಕಾರ್ಯಕ್ರಮ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಗ್ರಾಮ‌ ಸುಭೀಕ್ಷೆಗಾಗಿ ಶ್ರೀ ದೇವರ ಲೋಕ ಸಂಚಾರ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ಬೆಳ್ತಂಗಡಿಯಲ್ಲಿ ಗಾಂಧಿ ಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ: ನವಜೀವನ ಸಾಧಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕೇಂದ್ರ ಕಛೇರಿ ಶ್ರೀ ಗುರುಸಾನಿಧ್ಯ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಮತ್ತು ಆಡಳಿತ ಕಛೇರಿಯ ಉದ್ಘಾಟನೆ

Suddi Udaya
error: Content is protected !!