23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

ಅರಸಿನಮಕ್ಕಿ : ಮಹಾತ್ಮ ಗಾಂಧೀಜಿಯವರು ಸ್ವಚ್ಛತೆ, ಗ್ರಾಮ ಸ್ವರಾಜ್ಯಕ್ಕೆ ವಿಶೇಷ ಆದ್ಯತೆ ನೀಡಿದ್ದರು. ಶುಚಿತ್ವವೆಂಬುದು ಪ್ರತಿ ಮನೆಯಿಂದಲೆ ಆರಂಭವಾಗಬೇಕು. ಆಗ ಊರು, ಗ್ರಾಮ, ದೇಶ ಹೀಗೆ ಎಲ್ಲೆಡೆ ಸ್ವಚ್ಛತೆ ತನ್ನಿಂತಾನೆ ಸಾಧ್ಯವಾಗಲಿದೆ ಎಂದು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಹೇಳಿದರು.


ಅರಸಿನಮಕ್ಕಿ ಗ್ರಾ.ಪಂ. ವತಿಯಿಂದ ನಡೆದ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಾ.ಪಂ. ಅಧ್ಯಕ್ಷರಾದ ಗಾಯತ್ರಿ ನಾಳಾಲು ಮಾತನಾಡಿ, ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ಸಂಘ-ಸಂಸ್ಥೆಗಳು, ಸಾರ್ವಜನಿಕರನ್ನು ಅಭಿನಂದಿಸಿದರು.

ಪಂ. ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಮಾತನಾಡಿ ಸ್ವಚ್ಛತೆಯೆಂಬುದು ಒಂದು ದಿನಕ್ಕೆ ಸೀಮಿತವಾಗಬಾರದು. ಅರಸಿನಮಕ್ಕಿಯಲ್ಲಿ ಕಸ ವಿಲೇವಾರಿಗೆ ಸಮರ್ಪಕ ವ್ಯವಸ್ಥೆಯನ್ನು ಮಾಡಲು ಶ್ರಮಿಸುತ್ತಿರುವುದಾಗಿ ತಿಳಿಸಿದರು. ಗ್ರಾ.ಪಂ. ಸದಸ್ಯರುಗಳಾದ ಪ್ರೇಮಚಂದ್ರ ಕೆ., ಲಾವಣ್ಯ, ಜನಾರ್ದನ ದೇವಸ, ಶಕುಂತಳಾ ಆಚಾರ್ಯ, ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರ, ಕಾಲೇಜಿನ ಪ್ರಾಂಶುಪಾಲರಾದ ರಾಮಯ್ಯ ಶೆಟ್ಟಿ, ಹತ್ಯಡ್ಕ ಮತ್ತು ರೆಖ್ಯ ಗ್ರಾಮದ ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಎನ್‌ಎರ್‌ಎಲ್‌ಎಮ್ ಪ್ರತಿನಿಧಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ್ರ ವಂದಿಸಿದರು. ಇದಕ್ಕೂ ಮೊದಲು ಅರಸಿನಮಕ್ಕಿ ಪೇಟೆಯಲ್ಲಿ ಸ್ವಚ್ಛತೆಯನ್ನು ಕೈಗೊಳ್ಳಲಾಯಿತು.

Related posts

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿದ ಕು.ಮನಶ್ರೀ ಬೆಳಾಲು ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂ.ಮಾ. ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ಸೆ.7: ಕೊಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 40ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
error: Content is protected !!