September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಸಿನಮಕ್ಕಿ ಗ್ರಾ.ಪಂ.ನಲ್ಲಿ ಗಾಂಧೀ ಜಯಂತಿ ಆಚರಣೆ

ಅರಸಿನಮಕ್ಕಿ : ಮಹಾತ್ಮ ಗಾಂಧೀಜಿಯವರು ಸ್ವಚ್ಛತೆ, ಗ್ರಾಮ ಸ್ವರಾಜ್ಯಕ್ಕೆ ವಿಶೇಷ ಆದ್ಯತೆ ನೀಡಿದ್ದರು. ಶುಚಿತ್ವವೆಂಬುದು ಪ್ರತಿ ಮನೆಯಿಂದಲೆ ಆರಂಭವಾಗಬೇಕು. ಆಗ ಊರು, ಗ್ರಾಮ, ದೇಶ ಹೀಗೆ ಎಲ್ಲೆಡೆ ಸ್ವಚ್ಛತೆ ತನ್ನಿಂತಾನೆ ಸಾಧ್ಯವಾಗಲಿದೆ ಎಂದು ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಾಘವೇಂದ್ರ ನಾಯಕ್ ಹೇಳಿದರು.


ಅರಸಿನಮಕ್ಕಿ ಗ್ರಾ.ಪಂ. ವತಿಯಿಂದ ನಡೆದ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಗ್ರಾ.ಪಂ. ಅಧ್ಯಕ್ಷರಾದ ಗಾಯತ್ರಿ ನಾಳಾಲು ಮಾತನಾಡಿ, ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ಸಂಘ-ಸಂಸ್ಥೆಗಳು, ಸಾರ್ವಜನಿಕರನ್ನು ಅಭಿನಂದಿಸಿದರು.

ಪಂ. ಉಪಾಧ್ಯಕ್ಷರಾದ ಸುಧೀರ್ ಕುಮಾರ್ ಮಾತನಾಡಿ ಸ್ವಚ್ಛತೆಯೆಂಬುದು ಒಂದು ದಿನಕ್ಕೆ ಸೀಮಿತವಾಗಬಾರದು. ಅರಸಿನಮಕ್ಕಿಯಲ್ಲಿ ಕಸ ವಿಲೇವಾರಿಗೆ ಸಮರ್ಪಕ ವ್ಯವಸ್ಥೆಯನ್ನು ಮಾಡಲು ಶ್ರಮಿಸುತ್ತಿರುವುದಾಗಿ ತಿಳಿಸಿದರು. ಗ್ರಾ.ಪಂ. ಸದಸ್ಯರುಗಳಾದ ಪ್ರೇಮಚಂದ್ರ ಕೆ., ಲಾವಣ್ಯ, ಜನಾರ್ದನ ದೇವಸ, ಶಕುಂತಳಾ ಆಚಾರ್ಯ, ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರ, ಕಾಲೇಜಿನ ಪ್ರಾಂಶುಪಾಲರಾದ ರಾಮಯ್ಯ ಶೆಟ್ಟಿ, ಹತ್ಯಡ್ಕ ಮತ್ತು ರೆಖ್ಯ ಗ್ರಾಮದ ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಎನ್‌ಎರ್‌ಎಲ್‌ಎಮ್ ಪ್ರತಿನಿಧಿಗಳು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ್ರ ವಂದಿಸಿದರು. ಇದಕ್ಕೂ ಮೊದಲು ಅರಸಿನಮಕ್ಕಿ ಪೇಟೆಯಲ್ಲಿ ಸ್ವಚ್ಛತೆಯನ್ನು ಕೈಗೊಳ್ಳಲಾಯಿತು.

Related posts

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಖಂಡಿಸಿ ಸೂಕ್ತ ಕ್ರಮಕ್ಕೆ ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ವೇದಿಕೆಯಿಂದ ತಹಶೀಲ್ದಾರ್, ವಿಶೇಷ ತನಿಖಾದಳಕ್ಕೆ, ಬೆಳ್ತಂಗಡಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಕೆ

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಪ್ಲಾಸ್ಟಿಕ್ ನಿಷೇಧ ಬಗ್ಗೆ ವ್ಯಾಪಾರ ಕೇಂದ್ರಗಳ ಮೇಲೆ ಕಾರ್ಯಾಚರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಮಕ್ಕಳಿಂದ ನಿರಂತರ ಯಕ್ಷಗಾನ ಬಯಲಾಟ ಪ್ರದರ್ಶನ

Suddi Udaya

ಬ್ರಹ್ಮಶ್ರೀ ಕುಣಿತ ಭಜನೆ ಮಂಡಳಿಯಿಂದ ಬಳಂಜ ಸರ್ಕಾರಿ ಶಾಲೆಗೆ ಬ್ಯಾಂಡ್ ಸೆಟ್ ನ ದಂಡನಾಯಕನ ದಂಡ, ಹಾಗೂ ಕೊಳಲು, ಹಸ್ತಾಂತರ

Suddi Udaya
error: Content is protected !!