24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

ಕೊಕ್ಕಡ: ಜೇಸಿ ವಲಯ 15 ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರು ಜೇಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಅ.4ರಂದು ಅಧಿಕೃತ ಭೇಟಿ ನೀಡಲಿದ್ದಾರೆ.
ಸಂಜೆ 6.30ಕ್ಕೆ ಸಂತ ಜಾನರ ಶಾಲಾ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಅವರು ಕೊಕ್ಕಡ ಘಟಕದ ನೂತನ ವೆಬ್‌ಸೈಟ್ ಹಾಗೂ ಆಪ್ ಲೋಕಾರ್ಪಣೆ ಮಾಡಲಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದ ಕೌಕ್ರಾಡಿ ಚರ್ಚ್ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವಿಶಾಲಾಕ್ಷಿ ಬಿ, 108 ಆಂಬುಲೆನ್ಸ್ ಸಿಬ್ಬಂದಿ ವಿಲ್ಮಾ ಶ್ವೇತಾ ಸ್ಟೆಲ್ಲಾ, ಹಿರಿಯ ಸದಸ್ಯರಾದ ಯು.ನರಸಿಂಹ ನಾಯಕ್, ನಾಟಿ ವೈದ್ಯರಾದ ಕೆ. ವಸಂತ ಪೂಜಾರಿ ಅವರಿಗೆ ಸನ್ಮಾನ ನಡೆಯಲಿದೆ. ಸ್ಥಳೀಯ ಸಂತ ಜಾನರ ಹಿ.ಪ್ರಾ. ಶಾಲೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಆದ್ಯ, ಯೋಶಿತಾ, ವಿವಿಯನ್ ಸುವಾರಿಸ್, ಅಂಜನಾ, ರಿಷಿಕ್, ಮನಸ್ವಿ, ಕಿಶನ್, ಶ್ರವಣ್, ವೈಷ್ಣವ್, ಧನ್ಯಶ್ರೀ, ಆಕಾಶ್, ವೀಕ್ಷಾ, ಉಜ್ವಲ್, ರಾಯನ್, ಸಾಧನಾ, ನೇತೃಶ್ರೀ, ಚೈತ್ರೇಶ್, ಜಯ, ಪ್ರೆಸಿಲ್ಲಾ ಮಾನ್ಯಶ್ರೀ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು.

ಈ ಸಮಾರಂಭದಲ್ಲಿ ಜೇಸಿ ವಲಯ 15 ರ ಉಪಾಧ್ಯಕ್ಷರಾದ ಭರತ್ ಶೆಟ್ಟಿ, ವಲಯಾಧಿಕಾರಿ ಕಾರ್ತಿಕ್ ಬಿ. ಭಾಗವಹಿಸುವವರು. ಸಭೆಗೆ ಎಲ್ಲರಿಗೂ ಮುಕ್ತ ಸ್ವಾಗತವಿದೆ ಎಂದು ಕೊಕ್ಕಡ ಜೇಸಿಐ ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ತಿಳಿಸಿದ್ದಾರೆ.

Related posts

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya

ನ್ಯಾಯತರ್ಪು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ವಿಜಯ ಗೌಡ ಕಲಾಯಿತೊಟ್ಟು ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

Suddi Udaya

ಧರ್ಮಸ್ಥಳ ಬೂತ್ ಸಂಖ್ಯೆ 163ರ ಅಧ್ಯಕ್ಷ ಉಮಾನಾಥ್ ರವರ ಮನೆಗೆ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಬಂದಾರು ಗ್ರಾಮ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯ: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಿ.ಎಂ ನಿರ್ಧಾರ

Suddi Udaya
error: Content is protected !!