September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

ಕೊಕ್ಕಡ: ಜೇಸಿ ವಲಯ 15 ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರು ಜೇಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಅ.4ರಂದು ಅಧಿಕೃತ ಭೇಟಿ ನೀಡಲಿದ್ದಾರೆ.
ಸಂಜೆ 6.30ಕ್ಕೆ ಸಂತ ಜಾನರ ಶಾಲಾ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಅವರು ಕೊಕ್ಕಡ ಘಟಕದ ನೂತನ ವೆಬ್‌ಸೈಟ್ ಹಾಗೂ ಆಪ್ ಲೋಕಾರ್ಪಣೆ ಮಾಡಲಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದ ಕೌಕ್ರಾಡಿ ಚರ್ಚ್ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವಿಶಾಲಾಕ್ಷಿ ಬಿ, 108 ಆಂಬುಲೆನ್ಸ್ ಸಿಬ್ಬಂದಿ ವಿಲ್ಮಾ ಶ್ವೇತಾ ಸ್ಟೆಲ್ಲಾ, ಹಿರಿಯ ಸದಸ್ಯರಾದ ಯು.ನರಸಿಂಹ ನಾಯಕ್, ನಾಟಿ ವೈದ್ಯರಾದ ಕೆ. ವಸಂತ ಪೂಜಾರಿ ಅವರಿಗೆ ಸನ್ಮಾನ ನಡೆಯಲಿದೆ. ಸ್ಥಳೀಯ ಸಂತ ಜಾನರ ಹಿ.ಪ್ರಾ. ಶಾಲೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಆದ್ಯ, ಯೋಶಿತಾ, ವಿವಿಯನ್ ಸುವಾರಿಸ್, ಅಂಜನಾ, ರಿಷಿಕ್, ಮನಸ್ವಿ, ಕಿಶನ್, ಶ್ರವಣ್, ವೈಷ್ಣವ್, ಧನ್ಯಶ್ರೀ, ಆಕಾಶ್, ವೀಕ್ಷಾ, ಉಜ್ವಲ್, ರಾಯನ್, ಸಾಧನಾ, ನೇತೃಶ್ರೀ, ಚೈತ್ರೇಶ್, ಜಯ, ಪ್ರೆಸಿಲ್ಲಾ ಮಾನ್ಯಶ್ರೀ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು.

ಈ ಸಮಾರಂಭದಲ್ಲಿ ಜೇಸಿ ವಲಯ 15 ರ ಉಪಾಧ್ಯಕ್ಷರಾದ ಭರತ್ ಶೆಟ್ಟಿ, ವಲಯಾಧಿಕಾರಿ ಕಾರ್ತಿಕ್ ಬಿ. ಭಾಗವಹಿಸುವವರು. ಸಭೆಗೆ ಎಲ್ಲರಿಗೂ ಮುಕ್ತ ಸ್ವಾಗತವಿದೆ ಎಂದು ಕೊಕ್ಕಡ ಜೇಸಿಐ ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ತಿಳಿಸಿದ್ದಾರೆ.

Related posts

ಎ 6-7:ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಬೃಹತ್ ಉದ್ಯೋಗ ಮೇಳ, “ಉದ್ಯೋಗಂ-2026”

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಪವಿತ್ರ ಗರಿಗಳ ಆಶೀರ್ವಾದ ಭಾನುವಾರ

Suddi Udaya

ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷರು ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯಕ್ಕೆ ಭೇಟಿ

Suddi Udaya

ಬಳಂಜ ಬದಿನಡೆ ನಾಗಬ್ರಹ್ಮ ಕ್ಷೇತ್ರದ ವರ್ಷಾವಧಿ ಜಾತ್ರೋತ್ಸವ ಸಂಪನ್ನ

Suddi Udaya

ಬೆಳ್ತಂಗಡಿ: ಬಗರ್ ಹುಕುಂ ಅಕ್ರಮ–ಸಕ್ರಮ ಸಮಿತಿಯ ಸಭೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿರ್ಲಾಲು ಗ್ರಾ.ಪಂ. ನಲ್ಲಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya
error: Content is protected !!