25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

ಕೊಕ್ಕಡ: ಜೇಸಿ ವಲಯ 15 ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರು ಜೇಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಅ.4ರಂದು ಅಧಿಕೃತ ಭೇಟಿ ನೀಡಲಿದ್ದಾರೆ.
ಸಂಜೆ 6.30ಕ್ಕೆ ಸಂತ ಜಾನರ ಶಾಲಾ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಅವರು ಕೊಕ್ಕಡ ಘಟಕದ ನೂತನ ವೆಬ್‌ಸೈಟ್ ಹಾಗೂ ಆಪ್ ಲೋಕಾರ್ಪಣೆ ಮಾಡಲಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದ ಕೌಕ್ರಾಡಿ ಚರ್ಚ್ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವಿಶಾಲಾಕ್ಷಿ ಬಿ, 108 ಆಂಬುಲೆನ್ಸ್ ಸಿಬ್ಬಂದಿ ವಿಲ್ಮಾ ಶ್ವೇತಾ ಸ್ಟೆಲ್ಲಾ, ಹಿರಿಯ ಸದಸ್ಯರಾದ ಯು.ನರಸಿಂಹ ನಾಯಕ್, ನಾಟಿ ವೈದ್ಯರಾದ ಕೆ. ವಸಂತ ಪೂಜಾರಿ ಅವರಿಗೆ ಸನ್ಮಾನ ನಡೆಯಲಿದೆ. ಸ್ಥಳೀಯ ಸಂತ ಜಾನರ ಹಿ.ಪ್ರಾ. ಶಾಲೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಆದ್ಯ, ಯೋಶಿತಾ, ವಿವಿಯನ್ ಸುವಾರಿಸ್, ಅಂಜನಾ, ರಿಷಿಕ್, ಮನಸ್ವಿ, ಕಿಶನ್, ಶ್ರವಣ್, ವೈಷ್ಣವ್, ಧನ್ಯಶ್ರೀ, ಆಕಾಶ್, ವೀಕ್ಷಾ, ಉಜ್ವಲ್, ರಾಯನ್, ಸಾಧನಾ, ನೇತೃಶ್ರೀ, ಚೈತ್ರೇಶ್, ಜಯ, ಪ್ರೆಸಿಲ್ಲಾ ಮಾನ್ಯಶ್ರೀ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು.

ಈ ಸಮಾರಂಭದಲ್ಲಿ ಜೇಸಿ ವಲಯ 15 ರ ಉಪಾಧ್ಯಕ್ಷರಾದ ಭರತ್ ಶೆಟ್ಟಿ, ವಲಯಾಧಿಕಾರಿ ಕಾರ್ತಿಕ್ ಬಿ. ಭಾಗವಹಿಸುವವರು. ಸಭೆಗೆ ಎಲ್ಲರಿಗೂ ಮುಕ್ತ ಸ್ವಾಗತವಿದೆ ಎಂದು ಕೊಕ್ಕಡ ಜೇಸಿಐ ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ತಿಳಿಸಿದ್ದಾರೆ.

Related posts

ಪ್ರವರ್ಗ-1 ರಲ್ಲಿರುವ ಹಿಂದುಳಿದ ಜಾತಿಯ ಮೀನುಗಾರ ಮೊಗೇರರಿಗೆ ಪ.ಜಾತಿಯ ಪ್ರಮಾಣ ಪತ್ರ ನೀಡುವ ಹುನ್ನಾರದ ವಿರುದ್ಧ ಚುನಾವಣೆ ಬಳಿಕ ಪ್ರತಿಭಟನೆ: ಅಶೋಕ್ ಕೊಂಚಾಡಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ: ಮಗನನ್ನು ರಕ್ಷಿಸಲು ಹೋಗಿ ತಂದೆ ನೀರುಪಾಲು

Suddi Udaya

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ : ಶ್ರೀ ಧ.ಮ. ಕಾಲೇಜು ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ – ವಿಶೇಷ ಸಾಧಕರಿಗೆ ಸನ್ಮಾನ – ಚಿಗುರು ಪತ್ರಿಕೆ ಅನಾವರಣ

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸದಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಸಸಿ ವಿತರಣೆ

Suddi Udaya
error: Content is protected !!