23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

ನಾವೂರು ಗ್ರಾಮ ಪಂಚಾಯತಿನಲ್ಲಿ ಭಾರತದ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಜನ್ಮ ದಿನಾಚರಣೆ ಹಾಗೂ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆಯು ಅ.2 ರಂದು ನಡೆಸಲಾಯಿತು.

2024-2025 ನೇ ಸಾಲಿನ ಕ್ರಿಯಾ ಯೋಜನೆ ತಯಾರಿ ಬಗ್ಗೆ ಫಲಾನುಭವಿಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಯಿತು. ಆಯುಷ್ಮಾನ್ ಕಾರ್ಡ್ ಬಾಕಿ ಇರುವ ಅರ್ಹ ಫಲಾನುಭವಿಗಳಿಗೆ ಕಾರ್ಡ್ ಗಳನ್ನು ನೀಡುವ ಬಗ್ಗೆ ಗ್ರಾಮ ಸಭೆಯಲ್ಲಿ ಚರ್ಚಿಸಲಾಯಿತು. ಒಡಿಎಫ್ ಪ್ಲಸ್ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಾವೂರು ಗ್ರಾಮವನ್ನು ಒಡಿಎಫ್ ಪ್ಲಸ್ ಮೊಡೆಲ್ ಗ್ರಾಮ ಎಂದು ಘೋಷಿಸಲಾಯಿತು. ಅಧ್ಯಕ್ಷರ ಪರವಾಗಿ ಸದಸ್ಯ ಗಣೇಶ ಗೌಡರವರು ಘೋಷಣೆ ಓದಿದರು .

ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುನಂದ ವಹಿಸಿದರು. ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಶ್ರೀಮತಿ ಮಮತ, ಸದಸ್ಯರಾದ ಗಣೇಶ್ ಗೌಡ , ಹರೀಶ್ ಸಾಲಿಯಾನ್, ಬಾಲಕೃಷ್ಣ ಎಂ ಕೆ, ಶ್ರೀಮತಿ ವೇದಾವತಿ, ಎನ್ ಕೆ ಹಸೈನಾರ್ ಮತ್ತು ತೃಪ್ತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ,ಎಂ.ಬಿ.ಕೆ ,ಸದಸ್ಯರು ,ಅಂಗನವಾಡಿ ಕಾರ್ಯಕರ್ತರು ,ಆಶಾ ಕಾರ್ಯಕರ್ತರು ,ಗ್ರಾಮಸ್ಥರು ,ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಭಾಗವಹಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ. ವೆಂಕಟ ಕೃಷ್ಣರಾಜ ಸ್ವಾಗತಿಸಿ ಮಾಹಿತಿ ನೀಡಿ ಧನ್ಯವಾದವಿತ್ತರು. ನಂತರ ದ.ಕ .ಜಿ.ಪಂ ಪ್ರಾಥಮಿಕ ಶಾಲೆ ಮತ್ತು ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೋಹಿಣಿ ಹಾಗೂ ಸಹ ಅಧ್ಯಾಪಕರು, ಶಾಲಾ ಮಕ್ಕಳು , ಗ್ರಾಮಸ್ಥರು ಸೇರಿ ನಾವೂರು ಪೇಟೆ ಹಾಗೂ ಶಾಲಾ ವಠಾರದಲ್ಲಿ ಸ್ವಚ್ಛತೆ ಮಾಡಿದರು.

Related posts

ಬೆಳ್ತಂಗಡಿ: ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ಸುವರ್ಣ ರಂಗ ಸಮ್ಮಾನ್ , ಸಾಧನಾ ಭೂಷಣ – 2024

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಶಿವನಾಮ ಸ್ಮರಣೆಯೊಂದಿಗೆ ಭಕ್ತರ ಹೆಜ್ಜೆ

Suddi Udaya

ನೂರುಲ್ ಹುಧಾ ದರ್ಸ್ ವಾರ್ಷಿಕ ಹಾಗೂ ಬುರ್ದಾ ಮಜಲಿಸ್ ಸಮಾರಂಭದಲ್ಲಿ ಭೂನ್ಯಾಯ ಮಂಡಳಿಗೆ ನಾಮ ನಿರ್ದೇಶನ ಹೊಂದಿದ ಇಸ್ಮಾಯಿಲ್ ಕೆ ಪೆರಿಂಜೆ ರವರಿಗೆ ಗೌರವಾರ್ಪಣೆ

Suddi Udaya

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ಮುಖ್ಯ ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya
error: Content is protected !!