24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

ನಾವೂರು ಗ್ರಾಮ ಪಂಚಾಯತಿನಲ್ಲಿ ಭಾರತದ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಜನ್ಮ ದಿನಾಚರಣೆ ಹಾಗೂ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆಯು ಅ.2 ರಂದು ನಡೆಸಲಾಯಿತು.

2024-2025 ನೇ ಸಾಲಿನ ಕ್ರಿಯಾ ಯೋಜನೆ ತಯಾರಿ ಬಗ್ಗೆ ಫಲಾನುಭವಿಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಯಿತು. ಆಯುಷ್ಮಾನ್ ಕಾರ್ಡ್ ಬಾಕಿ ಇರುವ ಅರ್ಹ ಫಲಾನುಭವಿಗಳಿಗೆ ಕಾರ್ಡ್ ಗಳನ್ನು ನೀಡುವ ಬಗ್ಗೆ ಗ್ರಾಮ ಸಭೆಯಲ್ಲಿ ಚರ್ಚಿಸಲಾಯಿತು. ಒಡಿಎಫ್ ಪ್ಲಸ್ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಾವೂರು ಗ್ರಾಮವನ್ನು ಒಡಿಎಫ್ ಪ್ಲಸ್ ಮೊಡೆಲ್ ಗ್ರಾಮ ಎಂದು ಘೋಷಿಸಲಾಯಿತು. ಅಧ್ಯಕ್ಷರ ಪರವಾಗಿ ಸದಸ್ಯ ಗಣೇಶ ಗೌಡರವರು ಘೋಷಣೆ ಓದಿದರು .

ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುನಂದ ವಹಿಸಿದರು. ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಶ್ರೀಮತಿ ಮಮತ, ಸದಸ್ಯರಾದ ಗಣೇಶ್ ಗೌಡ , ಹರೀಶ್ ಸಾಲಿಯಾನ್, ಬಾಲಕೃಷ್ಣ ಎಂ ಕೆ, ಶ್ರೀಮತಿ ವೇದಾವತಿ, ಎನ್ ಕೆ ಹಸೈನಾರ್ ಮತ್ತು ತೃಪ್ತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ,ಎಂ.ಬಿ.ಕೆ ,ಸದಸ್ಯರು ,ಅಂಗನವಾಡಿ ಕಾರ್ಯಕರ್ತರು ,ಆಶಾ ಕಾರ್ಯಕರ್ತರು ,ಗ್ರಾಮಸ್ಥರು ,ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಭಾಗವಹಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ. ವೆಂಕಟ ಕೃಷ್ಣರಾಜ ಸ್ವಾಗತಿಸಿ ಮಾಹಿತಿ ನೀಡಿ ಧನ್ಯವಾದವಿತ್ತರು. ನಂತರ ದ.ಕ .ಜಿ.ಪಂ ಪ್ರಾಥಮಿಕ ಶಾಲೆ ಮತ್ತು ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೋಹಿಣಿ ಹಾಗೂ ಸಹ ಅಧ್ಯಾಪಕರು, ಶಾಲಾ ಮಕ್ಕಳು , ಗ್ರಾಮಸ್ಥರು ಸೇರಿ ನಾವೂರು ಪೇಟೆ ಹಾಗೂ ಶಾಲಾ ವಠಾರದಲ್ಲಿ ಸ್ವಚ್ಛತೆ ಮಾಡಿದರು.

Related posts

ಬೆಳ್ತಂಗಡಿ ಸ.ಪ್ರ. ದರ್ಜೆ ಕಾಲೇಜಿನಲ್ಲಿ “ಉದ್ಯೋಗ ಹುಡುಕಬೇಡಿ – ಸೃಷ್ಟಿಸಿ” ಎಂಬ ವಿಷಯದ ಕುರಿತು ಕಾರ್ಯಾಗಾರ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಅದ್ವೈತ ರಥ ಯಾತ್ರೆಗೆ ಭವ್ಯ ಸ್ವಾಗತ

Suddi Udaya

ಪುಂಜಾಲಕಟ್ಟೆ: ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ನೂತನ ಕಛೇರಿ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ ಹಾಗೂ ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಯಶೋ’ ಯಕ್ಷನಮನ-ಗಾನ-ನೃತ್ಯ-ಚಿತ್ರ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಅತಿಥಿ ಉಪನ್ಯಾಸಕರ ಸಂಘದ ಪದಾಧಿಕಾರಿಗಳಿಂದ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!