23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಗ್ರಾಮ ಪಂಚಾಯತುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ, ಜನಪರ ಆಡಳಿತ, ಪಂಚಾಯತು ವ್ಯಾಪ್ತಿಯಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ಪಂಚಾಯತಕ್ಕೆ ಆದಾಯ ಮೂಲಗಳ ನಿರ್ಮಾಣ ಮೊದಲಾದ ಉತ್ತಮ ಕಾರ್ಯಗಳನ್ನು ಪರಿಗಣಿಸಿ 2022-23ನೇ ಸಾಲಿನ ಪ್ರತಿಷ್ಠಿತ `ಗಾಂಧಿ ಗ್ರಾಮ ಪುರಸ್ಕಾರ’ ಪ್ರಶಸ್ತಿ ಅರ್ಹವಾಗಿ ಬಳಂಜ ಗ್ರಾಮ‌ ಪಂಚಾಯತ್ ಗೆ ಒಲಿದು ಬಂದಿದೆ.

ಅ.2 ಗಾಂಧಿ ಜಯಂತಿಯಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ವಿಧಾನ ಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಹಾಗೂ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆರವರಿಂದ ಬಳಂಜ ಗ್ರಾಮ ಪಂಚಾಯತ್ ದ ಅಧ್ಯಕ್ಷೆ ಶೋಭಾ ಕುಲಾಲ್, ಪಂ.ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್,ಮಾಜಿ ಅಧ್ಯಕ್ಷ ಹೇಮಂತ್, ಉಪಾಧ್ಯಕ್ಷ ಯಶೋಧರ ಶೆಟ್ಟಿ ಹಾಗೂ ಸದಸ್ಯರು ಭಾಗವಹಿಸಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಪುರಸ್ಕಾರದಲ್ಲಿ ಪ್ರಶಸ್ತಿ ಪತ್ರ, ಪ್ರಶಸ್ತಿ ಫಲಕ ಮತ್ತು ರೂ.5 ಲಕ್ಷಗಳ ನಗದು ಬಹುಮಾನವನ್ನು ಒಳಗೊಂಡಿರುತ್ತದೆ.

Related posts

ಭಾರತೀಯ ಸೇನೆಗೆ ಆಯ್ಕೆಯಾದ ಬಳಂಜದ ಯುವಕ ಮನೋಹರ್ ಪೂಜಾರಿಯವರಿಗೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ವತಿಯಿಂದ ಗೌರವಾರ್ಪಣೆ

Suddi Udaya

9/11 ಅರ್ಜಿಗಳನ್ನು ಕಾಲ ಮಿತಿಯಲ್ಲಿ ಇತ್ಯರ್ಥಕ್ಕೆ ತಾಲೂಕಿಗೆ ಮೂರು ದಿನಗಳ ಅಧಿಕಾರಿಗಳ ಭೇಟಿಗೆ ಉಸ್ತುವಾರಿ ಸಚಿವರ ಸೂಚನೆ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಗೌರವಾದ್ಯಕ್ಷರಾಗಿ ಕಾಜೂರು ತಂಙಳ್ ರವರು ಅಧಿಕಾರ ಸ್ವೀಕಾರ ಮತ್ತು ಮಹಾಸಭೆ

Suddi Udaya

ಬೆಳ್ತಂಗಡಿ: ಅಜ್ಜಿಯನ್ನುಕೊಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಬಂಧಿತನಾಗಿದ್ದ ಆರೋಪಿ ಅಶೋಕ್ ಅಸೌಖ್ಯದಿಂದ ಸಾವು

Suddi Udaya

ಕಾಶಿಪಟ್ಣ ಗ್ರಾ.ಪಂ. ಗೆ ಗಾಂಧೀ ಗ್ರಾಮ ಪುರಸ್ಕಾರ ಪ್ರಶಸ್ತಿ ಪ್ರದಾನ: ಸತೀಶ್. ಕೆ ಕಾಶಿಪಟ್ಣ ಮತ್ತು ಪಂ.ಅ.ಅ. ರಾಘವೇಂದ್ರ ಪಟೇಲ್ ರಿಂದ ಪ್ರಶಸ್ತಿ ಸ್ವೀಕಾರ

Suddi Udaya

ಪಟ್ರಮೆ ಗ್ರಾಮದಲ್ಲಿ ಎಂಟು ತಿಂಗಳ ಹಿಂದೆ ವಿಷ ಸೇವಿಸಿ ಸಾವನ್ನಪ್ಪಿದ ರಕ್ಷಿತಾ ಮತ್ತು ಲಾವಣ್ಯ: ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಒತ್ತಾಯಿಸಿ, ದಲಿತ ಹಕ್ಕುಗಳ ಹೋರಾಟ ಸಮಿತಿಯಿಂದ ಪೊಲೀಸರಿಗೆ ಮನವಿ

Suddi Udaya
error: Content is protected !!