ಮದ್ಯದ ಅಂಗಡಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ : ಮದ್ಯದ ಅಂಗಡಿ ಹೆಚ್ಚಿಸಿ, ಗಾಂಧಿ ಜಯಂತಿ ಆಚರಿಸಲು ಮುಂದಾದ ರಾಜ್ಯ ಸರಕಾರದ ನೈತಿಕತೆ ಪ್ರಶ್ನಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸಲಾಯಿತು.


ಪ್ರತಿಭಟನೆ ಉದ್ದೇಶಿಸಿ ಕ್ಷೇತ್ರ ಅಧ್ಯಕ್ಷರಾದ ನವಾಝ್ ಕಟ್ಟೆ ಮಾತನಾಡಿ ಮದ್ಯದ ಅಂಗಡಿ ಹೆಚ್ಚಿಸುವ ಸರ್ಕಾರದ ತೀರ್ಮಾನಕ್ಕೆ ನಾಗರೀಕರು ಯಾವುದೇ ಕಾರಣಕ್ಕೂ ಒಪ್ಪುದಿಲ್ಲ ಮತ್ತು ಈ ಕೂಡಲೇ ಈ ತೀರ್ಮಾನವನ್ನು ಹಿಂಪಡೆದು ಗಾಂಧಿ ನಾಡಿನಲ್ಲಿ ಗಾಂಧಿ ತತ್ವ ಅನುಸರಿಸಬೇಕು ಎಂದು ಅಗ್ರಹಿಸಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ನಿಸಾರ್ ಕುದ್ರಡ್ಕ, ಕೋಶಾಧಿಕಾರಿ ಅಶ್ರಫ್ ಕಟ್ಟೆ, ಸ್ವಾಲಿ ಮದ್ದಡ್ಕ, ಬ್ಲಾಕ್ ನಾಯಕರು, ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.

Leave a Comment

error: Content is protected !!