37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಕಳೆಂಜ: ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ, ಪಾದೆ ಅಂಗನವಾಡಿ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಶಿಬರಾಜೆ, ಪಾದೆ ಹಾಗೂ ಜೆಸಿಐ ಕೊಕ್ಕಡ, ಕಪಿಲಾ ಘಟಕ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಅ.1 ರಂದು ನಡೆಯಿತು.


ಕಳೆಂಜ ಗ್ರಾ.ಪಂ. ಸದಸ್ಯ ನಿತ್ಯಾನಂದ ರೈ ಸ್ವಚ್ಛತಾ ಹಿ ಸೇವಾ ಪ್ರತಿಜ್ಞಾ ವಿಧಿಯನ್ನು ವಾಚಿಸಿದರು. ನಂತರ ಶಿಬರಾಜೆ, ಪಾದೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಮಾಡಲಾಯಿತು.


ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಪ್ರತಿಮಾ ನಾರಾಯಣ, ಸದಸ್ಯರುಗಳಾದ ಜಯವರ್ಮ ಜೈನ್, ಸೆವ್ರಿನ್ ಲಕ್ಷ್ಮೀ ನಾರಾಯಣ, ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಟಿ. ಸೆಬಾಸ್ಟಿನ್, ಜೆಸಿಐ ಸದಸ್ಯರಾದ ಸಂತೋಷ್ ಜೈನ್, ಅಕ್ಷತ್ ರೈ, ಅರಣ್ಯ ಸಮಿತಿಯ ಅಧ್ಯಕ್ಷ ಧನಂಜಯ ಗೌಡ, ಕಳೆಂಜ ಗ್ರಾ.ಪಂ. ಸದಸ್ಯೆ ಪ್ರೇಮಾ ಬಿ.ಎಸ್. ಕಳೆಂಜ ಸಿ.ಎ. ಬ್ಯಾಂಕ್ ನಿರ್ದೇಶಕ ರಾಜೇಶ್, ಸಂಜೀವಿನಿ ಕೃಷಿ ಸಖಿ ಸುಮಿತ್ರಾ, ಹೊನ್ನಪ್ಪ ಗೌಡ, ರಾಘವ ಗೌಡ ಬಲ್ಕಾಜೆ, ಧನುಷ್, ಧನ್ಯಾ, ಬಾಬು ರೈ, ನಾರಾಯಣ ಮಾರ್ತಾಡಿ, ಅಶ್ವಥ್, ಅಮೃತ್, ಮಕ್ಕಳು ಉಪಸ್ಥಿತರಿದ್ದರು.


ಅಕ್ಷತ್ ರೈ ಸಿಹಿತಿಂಡಿ ವಿತರಿಸಿದರು. ಅಂಗನವಾಡಿ ಕಾರ್ಯಕರ್ತೆ ಪ್ರಿಯಾ ಸ್ವಾಗತಿಸಿದರು. ಅಂಗನವಾಡಿ ಸಹಾಯಕಿ ಅನ್ಸಿಲ್ಲಾ ವಂದಿಸಿದರು.

Related posts

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಶಾಸಕ ಹರೀಶ್ ಪೂಂಜರಿಗೆ ಅಂಗರಕ್ಷಕ ನಿಯೋಜನೆ

Suddi Udaya

ಪುತ್ತೂರಿನ ರಾಧಾ’ಸ್ ನಲ್ಲಿ ಆಫರ್‌ಗಳ ಬಿಗ್‌ಬಾಸ್: ರಾಧಾ’ಸ್ ಉತ್ಸವದ ಎರಡನೇ ವಾರದ ಡ್ರಾ.

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!