32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ: ಸಮಾಜ ಸೇವೆ ಮಾಡುವ ಚಿಂತನೆ ಎಲ್ಲರಲ್ಲಿ ಇರುವುದಿಲ್ಲ.ಸ್ವಾರ್ಥ ಬದುಕು ಸಾಧಿಸುವವರೆ ಅಧಿಕ. ಅದರೆ ಕಳೆದ 11 ವರ್ಷಗಳ ಹಿಂದೆ ನೊಂದವರ ಸೇವೆ ಮಾಡುವ ಕನಸನ್ನು ಕಂಡ ರಾಜಕೇಸರಿ ತಂಡದ ಸ್ಥಾಪಕಾದ್ಯಕ್ಷ ದೀಪಕ್ ಜಿ ಯವರ ಕನಸು ಸಮಾಜಕ್ಕೆ ಮಾದರಿಯಾಗಿದೆ. ಇಂತಹ ಸಮಾಜ ಸೇವಾ ಸಂಸ್ಥೆಗೆ ಆದ್ಯತೆ ನೆಲೆಯಲ್ಲಿ ಸರಕಾರ ನೆರವು ನೀಡಬೇಕು ಮತ್ತು ದೀಪಕ್ ಜಿ ಯವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂದು ಹಿಂದೂ ಮುಖಂಡ ಅರುಣ್ ಪುತ್ತಿಲ ಹೇಳಿದರು.

ಅವರು ಅ.1 ರಂದು ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ನಾನಾ ತಾಲೂಕಿನ 11 ಅಶಕ್ತ ಆಶ್ರಮಗಳಿಗೆ ಅಕ್ಕಿ ವಿತರಣೆ,11 ಅಶಕ್ತ ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬೆಳ್ತಂಗಡಿ ಮೋಸ್ಟ್ ಹೋಲಿ ರೆಡಿಮೇಡ್ ಚರ್ಚ್ ಧರ್ಮಗುರು ಫಾ. ವಾಲ್ಟರ್ ಡಿಮೆಲ್ಲೊ , ಬಳಂಜದ ಧರ್ಮಗುರು ಝಮೀರ್ ಸಅದಿ ಅಲ್ ಫಾಝಿಲ್ , ಉಜಿರೆ ಶಾಖೆಯ ಉಪವಲಯ ಅರಣ್ಯಾಧಿಕಾರಿ ಹರಿಪ್ರಸಾದ್ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್, ಪತ್ರಕರ್ತ ಮನೋಹರ ಬಳಂಜ, ತಾಲೂಕು ಆಸ್ಪತ್ರೆ ಕಚೇರಿಯ ವ್ಯವಸ್ಥಾಪಕ ಅಜಯ್ ., ಮದಿಮಯೆ ತುಳು ಚಲನಚಿತ್ರದ ತಂಡ, ಬಾಲ ನಟ ಅಮನ್ ಎಸ್.ಕರ್ಕೇರ, ರಾಜಕೇಸರಿ ತಂಡದ ಸ್ಥಾಪಕಾದ್ಯಕ್ಷ ದೀಪಕ್ ಜಿ, ಜಿಲ್ಲಾದ್ಯಕ್ಷ ಅಶೋಕ್ ಪೂಜಾರಿ ಮಾಲೆಮಾರ್, ಖ್ಯಾತಿ ನೃತ್ಯ ಕೊರಿಯೋಗ್ರಾಫರ್ ರಾಜೇಶ್ ಕಣ್ಣೂರು ಉಪಸ್ಥಿತರಿದ್ದರು. ಟ್ರಸ್ಟ್ ಸದಸ್ಯ ಪ್ರೇಮ್ ರಾಜ್ ರೋಸನ್ ಸಿಕ್ವೇರಾ ಸ್ವಾಗತಿಸಿ, ಅಧ್ಯಕ್ಷ ಸಂದೀಪ್ ವಂದಿಸಿದರು. ಮಹೇಶ್ ಕಾರ್ಯಕ್ರಮ ನಿರೂಪಿಸಿದರು.

Related posts

ನ.9: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕಂಚಿ ಕಾಮಕೋಟಿ ಪೀಠಾಧಿಪತಿ ಪೂಜ್ಯ ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ಪುರಪ್ರವೇಶ

Suddi Udaya

ಮಚ್ಚಿನ: ಮನೆಗೆ ಮರ ಬಿದ್ದು ಹಾನಿ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಉಜಿರೆಯಲ್ಲಿ “ಖಿಯಾದ” ಎಸ್.ಎಸ್. ಎಫ್ ರಾಜ್ಯ ಪ್ರತಿನಿಧಿ ಸಮಾವೇಶ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ವೆನ್ಲಾಕ್ ಮತ್ತು ಲೇಡಿಗೋಷನ್ ಆಸ್ಪತ್ರೆಯ 175 ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವಿರೇಂದ್ರ ಹೆಗ್ಗಡೆಯವರನ್ನು ಭೇಟಿಯಾದ ವೆನ್ಲಾಕ್ ರಕ್ಷಾ ಸಮಿತಿ

Suddi Udaya
error: Content is protected !!