24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ: ಸಮಾಜ ಸೇವೆ ಮಾಡುವ ಚಿಂತನೆ ಎಲ್ಲರಲ್ಲಿ ಇರುವುದಿಲ್ಲ.ಸ್ವಾರ್ಥ ಬದುಕು ಸಾಧಿಸುವವರೆ ಅಧಿಕ. ಅದರೆ ಕಳೆದ 11 ವರ್ಷಗಳ ಹಿಂದೆ ನೊಂದವರ ಸೇವೆ ಮಾಡುವ ಕನಸನ್ನು ಕಂಡ ರಾಜಕೇಸರಿ ತಂಡದ ಸ್ಥಾಪಕಾದ್ಯಕ್ಷ ದೀಪಕ್ ಜಿ ಯವರ ಕನಸು ಸಮಾಜಕ್ಕೆ ಮಾದರಿಯಾಗಿದೆ. ಇಂತಹ ಸಮಾಜ ಸೇವಾ ಸಂಸ್ಥೆಗೆ ಆದ್ಯತೆ ನೆಲೆಯಲ್ಲಿ ಸರಕಾರ ನೆರವು ನೀಡಬೇಕು ಮತ್ತು ದೀಪಕ್ ಜಿ ಯವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂದು ಹಿಂದೂ ಮುಖಂಡ ಅರುಣ್ ಪುತ್ತಿಲ ಹೇಳಿದರು.

ಅವರು ಅ.1 ರಂದು ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ನಾನಾ ತಾಲೂಕಿನ 11 ಅಶಕ್ತ ಆಶ್ರಮಗಳಿಗೆ ಅಕ್ಕಿ ವಿತರಣೆ,11 ಅಶಕ್ತ ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬೆಳ್ತಂಗಡಿ ಮೋಸ್ಟ್ ಹೋಲಿ ರೆಡಿಮೇಡ್ ಚರ್ಚ್ ಧರ್ಮಗುರು ಫಾ. ವಾಲ್ಟರ್ ಡಿಮೆಲ್ಲೊ , ಬಳಂಜದ ಧರ್ಮಗುರು ಝಮೀರ್ ಸಅದಿ ಅಲ್ ಫಾಝಿಲ್ , ಉಜಿರೆ ಶಾಖೆಯ ಉಪವಲಯ ಅರಣ್ಯಾಧಿಕಾರಿ ಹರಿಪ್ರಸಾದ್ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್, ಪತ್ರಕರ್ತ ಮನೋಹರ ಬಳಂಜ, ತಾಲೂಕು ಆಸ್ಪತ್ರೆ ಕಚೇರಿಯ ವ್ಯವಸ್ಥಾಪಕ ಅಜಯ್ ., ಮದಿಮಯೆ ತುಳು ಚಲನಚಿತ್ರದ ತಂಡ, ಬಾಲ ನಟ ಅಮನ್ ಎಸ್.ಕರ್ಕೇರ, ರಾಜಕೇಸರಿ ತಂಡದ ಸ್ಥಾಪಕಾದ್ಯಕ್ಷ ದೀಪಕ್ ಜಿ, ಜಿಲ್ಲಾದ್ಯಕ್ಷ ಅಶೋಕ್ ಪೂಜಾರಿ ಮಾಲೆಮಾರ್, ಖ್ಯಾತಿ ನೃತ್ಯ ಕೊರಿಯೋಗ್ರಾಫರ್ ರಾಜೇಶ್ ಕಣ್ಣೂರು ಉಪಸ್ಥಿತರಿದ್ದರು. ಟ್ರಸ್ಟ್ ಸದಸ್ಯ ಪ್ರೇಮ್ ರಾಜ್ ರೋಸನ್ ಸಿಕ್ವೇರಾ ಸ್ವಾಗತಿಸಿ, ಅಧ್ಯಕ್ಷ ಸಂದೀಪ್ ವಂದಿಸಿದರು. ಮಹೇಶ್ ಕಾರ್ಯಕ್ರಮ ನಿರೂಪಿಸಿದರು.

Related posts

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು ಮತ್ತು ತುಳು ಸಂಘ ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜು ಆಶ್ರಯದಲ್ಲಿ ಎರಡು ದಿನಗಳ ತಾಲೂಕು ಮಟ್ಟದ ತುಳು ಸಾಹಿತ್ಯ ರಚನಾ ಕಮ್ಮಟ ಉದ್ಘಾಟನೆ

Suddi Udaya

ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಂ. ಸ್ವಾಯತ್ತ ಕಾಲೇಜಿನಲ್ಲಿ ಮನೋವಿಜ್ಞಾನ ಸಂಘ ಉದ್ಘಾಟನೆ

Suddi Udaya

ಕೊಯ್ಯೂರು ಪ್ರಾ.ಕೃ.ಪ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.157 ಕೋಟಿ ವಾರ್ಷಿಕ ವ್ಯವಹಾರ, ರೂ.61.70ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 10.25 ಡಿವಿಡೆಂಟ್

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಆಯುಧ ಪೂಜೆ

Suddi Udaya
error: Content is protected !!