September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ತಾಲೂಕಿನ 11 ಆಶ್ರಮಗಳಿಗೆ ಅಕ್ಕಿ ವಿತರಣೆ,11 ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ

ಬೆಳ್ತಂಗಡಿ: ಸಮಾಜ ಸೇವೆ ಮಾಡುವ ಚಿಂತನೆ ಎಲ್ಲರಲ್ಲಿ ಇರುವುದಿಲ್ಲ.ಸ್ವಾರ್ಥ ಬದುಕು ಸಾಧಿಸುವವರೆ ಅಧಿಕ. ಅದರೆ ಕಳೆದ 11 ವರ್ಷಗಳ ಹಿಂದೆ ನೊಂದವರ ಸೇವೆ ಮಾಡುವ ಕನಸನ್ನು ಕಂಡ ರಾಜಕೇಸರಿ ತಂಡದ ಸ್ಥಾಪಕಾದ್ಯಕ್ಷ ದೀಪಕ್ ಜಿ ಯವರ ಕನಸು ಸಮಾಜಕ್ಕೆ ಮಾದರಿಯಾಗಿದೆ. ಇಂತಹ ಸಮಾಜ ಸೇವಾ ಸಂಸ್ಥೆಗೆ ಆದ್ಯತೆ ನೆಲೆಯಲ್ಲಿ ಸರಕಾರ ನೆರವು ನೀಡಬೇಕು ಮತ್ತು ದೀಪಕ್ ಜಿ ಯವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು ಎಂದು ಹಿಂದೂ ಮುಖಂಡ ಅರುಣ್ ಪುತ್ತಿಲ ಹೇಳಿದರು.

ಅವರು ಅ.1 ರಂದು ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 542ನೆಯ ಸೇವಾ ಯೋಜನೆ ಅಂಗವಾಗಿ ನಾನಾ ತಾಲೂಕಿನ 11 ಅಶಕ್ತ ಆಶ್ರಮಗಳಿಗೆ ಅಕ್ಕಿ ವಿತರಣೆ,11 ಅಶಕ್ತ ಬಡ ರೋಗಿಗಳಿಗೆ ವಸ್ತ್ರ ಹಾಗೂ ಅರಣ್ಯ ಇಲಾಖೆ ಸಹಕಾರದೊಂದಿಗೆ 11 ವಿಧದ ಬಗೆಯ ಹಣ್ಣು ಹಂಪಲುಗಳ ಗಿಡಗಳ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬೆಳ್ತಂಗಡಿ ಮೋಸ್ಟ್ ಹೋಲಿ ರೆಡಿಮೇಡ್ ಚರ್ಚ್ ಧರ್ಮಗುರು ಫಾ. ವಾಲ್ಟರ್ ಡಿಮೆಲ್ಲೊ , ಬಳಂಜದ ಧರ್ಮಗುರು ಝಮೀರ್ ಸಅದಿ ಅಲ್ ಫಾಝಿಲ್ , ಉಜಿರೆ ಶಾಖೆಯ ಉಪವಲಯ ಅರಣ್ಯಾಧಿಕಾರಿ ಹರಿಪ್ರಸಾದ್ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ರಾಜೇಶ್ ಕೋಟ್ಯಾನ್, ಪತ್ರಕರ್ತ ಮನೋಹರ ಬಳಂಜ, ತಾಲೂಕು ಆಸ್ಪತ್ರೆ ಕಚೇರಿಯ ವ್ಯವಸ್ಥಾಪಕ ಅಜಯ್ ., ಮದಿಮಯೆ ತುಳು ಚಲನಚಿತ್ರದ ತಂಡ, ಬಾಲ ನಟ ಅಮನ್ ಎಸ್.ಕರ್ಕೇರ, ರಾಜಕೇಸರಿ ತಂಡದ ಸ್ಥಾಪಕಾದ್ಯಕ್ಷ ದೀಪಕ್ ಜಿ, ಜಿಲ್ಲಾದ್ಯಕ್ಷ ಅಶೋಕ್ ಪೂಜಾರಿ ಮಾಲೆಮಾರ್, ಖ್ಯಾತಿ ನೃತ್ಯ ಕೊರಿಯೋಗ್ರಾಫರ್ ರಾಜೇಶ್ ಕಣ್ಣೂರು ಉಪಸ್ಥಿತರಿದ್ದರು. ಟ್ರಸ್ಟ್ ಸದಸ್ಯ ಪ್ರೇಮ್ ರಾಜ್ ರೋಸನ್ ಸಿಕ್ವೇರಾ ಸ್ವಾಗತಿಸಿ, ಅಧ್ಯಕ್ಷ ಸಂದೀಪ್ ವಂದಿಸಿದರು. ಮಹೇಶ್ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya

ಗೇರುಕಟ್ಟೆ ಪ್ರೌಢ ಶಾಲಾ ಸಮೀಪ ಡೆಂಗ್ಯೂ, ಮಲೇರಿಯಾ ಹರಡುವ ಕೇಂದ್ರ ಸೃಷ್ಟಿ

Suddi Udaya

ಕಿರಿಯ ವಯಸ್ಸಿನಲ್ಲಿಯೇ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಬೆಳ್ತಂಗಡಿಯ ಯುವಕ ಮಂಜುನಾಥ್ ಶಿವಲಿಂಗಪ್ಪ ಜಿ.

Suddi Udaya

ವಲಯ ಮಟ್ಟದ ಖೋ ಖೋ ಪಂದ್ಯಾಟ: ಶಿರ್ಲಾಲು ಸ.ಉ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕೊಲ್ಲೂರಿನಿಂದ-ನಾಡಿನ ಪ್ರಸಿದ್ದ ಶ್ರದ್ದಾಕೇಂದ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ: ಉಜಿರೆಯಲ್ಲಿ ಧರ್ಮ ಸಂರಕ್ಷಣಾ ರಥಯಾತ್ರೆಗೆ ಅದ್ದೂರಿ ಚಾಲನೆ,

Suddi Udaya

ಬಳಂಜ: ನಾರಾವಿ ವಲಯ ಕ್ರೀಡಾ ಕೂಟ ಉದ್ಘಾಟನೆ

Suddi Udaya
error: Content is protected !!