24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

ಇಂದಬೆಟ್ಟು: ಮಹಾತ್ಮ ಗಾಂಧೀಜಿ ಯವರ ಜನ್ಮದಿನಾಚರಣೆ ಅಂಗವಾಗಿ ಭಾರತ ಸರಕಾರದ ನಿರ್ದೇಶನದಂತೆ ಸ್ವಚ್ಚತಾ ಹಿ ಸೇವಾ/ ಸ್ವಚ್ಛತೆಯೇ ಸೇವೆ ಎಂಬ ಕಾರ್ಯಕ್ರಮವು ಅ.1 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟುವಿನಲ್ಲಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ ರವರ ನೇತೃತ್ವದಲ್ಲಿ ಇಂದಬೆಟ್ಟು ಪರಿಸರದಲ್ಲಿ ಸ್ವಚ್ಚತಾ ಕಾರ್ಯ ನಡೆಯಿತು.

ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯರು ಸಿಬ್ಬಂದಿ ವರ್ಗದವರು, ಗ್ರಾಮದ ಯುವ ಸಂಘಟನೆ ನವಭಾರತ್ ಗೆಳೆಯರ ಬಳಗ ಕಲ್ಲಾಜೆ ಇಂದಬೆಟ್ಟು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಇಂದಬೆಟ್ಟು ಸಂಜೀವಿನಿ ಒಕ್ಕೂಟ ಸದಸ್ಯರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಇಂದಬೆಟ್ಟು ಸುಧರ್ಮ ಆಟೋ ರಿಕ್ಷಾ ಚಾಲಕ ಮಾಲಕರು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ನೋಡೆಲ್ ಅಧಿಕಾರಿ ಶ್ರೀಮತಿ ತಾರಕೇಶ್ವರಿ ಯವರು, ಸಿ ಆರ್.ಟಿ ತಾಲೂಕು ಸಂಯೋಜಕ ವಿನೋದ್ ಪ್ರಸಾದ್ ಉಪಸ್ಥಿತರಿದ್ದರು. . ಪ್ರಾಥಮಿಕ ಆರೋಗ್ಯ ಕೇಂದ್ರದ ರಕ್ಷಿತ್ ಸ್ವಾಗತಿಸಿ ಪ್ರತಿಜ್ಞೆ ಭೋದಿಸಿದರು, ಪಂಚಾಯತ್ ಕಾರ್ಯದರ್ಶಿ ಗಿರಿಯಪ್ಪ ಗೌಡ ರವರು ವಂದಿಸಿದರು.

Related posts

ಕಳಿಯ ನ್ಯಾಯತರ್ಪು ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya

ಕನ್ಯಾಡಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಂತರಾಷ್ಟ್ರೀಯ ಆಖಾಡ ಪರಿಷತ್ ನ ಅಧ್ಯಕ್ಷ ಹರಿಗಿರಿ ಮಹಾರಾಜ ಭೇಟಿ : ಅಯೋಧ್ಯೆಯ ಶಾಖಾಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ರಕ್ತೇಶ್ವರಿ ಪದವು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾಗರಿಕ ಯುವಜನ ವೇದಿಕೆಯಿಂದ ಯೂತ್ ಸಿವಿಲ್ ಫಾರಂ ಬೆಳ್ತಂಗಡಿ ಇದರ ನೂತನ ಸಮಿತಿ ರಚನೆ

Suddi Udaya

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ವಿಶ್ವ ಪರಿಸರ ದಿನಾಚರಣೆ: ಹಣ್ಣಿನ ಗಿಡ ನೆಟ್ಟು ಪರಿಸರ ಸಂರಕ್ಷಣೆಗೆ ಸಂಕಲ್ಪ

Suddi Udaya
error: Content is protected !!