ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಉಜಿರೆ : ಸ್ವಚ್ಛತಾ ಹೀ ಸೇವಾ ವಿಶೇಷ ಆಂದೋಲನದ ಅಂಗವಾಗಿ, ಅ. 1ರಂದು ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡೆಕೊಟ್ಟು-ಪಾಣ್ಯಾಲು ಕೊರಗರ ಕಾಲನಿಯಲ್ಲಿ ಸ್ವಚ್ಛತಾ ಅಭಿಯಾನದಡಿ ಶ್ರಮದಾನವನ್ನು ಮಾಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡು, ಸ್ವಚ್ಛತಾ ಶ್ರಮದಾನದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡರು. ಬಳಿಕ, ಸ್ವಚ್ಛತಾ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್‌ ಉಪಾಧ್ಯಕ್ಷ ರವಿಕುಮಾರ್‌, ತಾಲೂಕು ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್‌, ಸಹಾಯಕ ಲೆಕ್ಕಾಧಿಕಾರಿ ಗಣೇಶ್‌ ಪೂಜಾರಿ, ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಪ್ರಕಾಶ್‌ ಶೆಟ್ಟಿ, ಕಾರ್ಯದರ್ಶಿ ಶ್ರವಣ್‌ ಕುಮಾರ್‌ ರವರು ಉಪಸ್ಥಿತರಿದ್ದರು.

Leave a Comment

error: Content is protected !!