25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅ.4: ಕೊಕ್ಕಡ ಜೇಸಿಐಗೆ ಜೇಸಿ ವಲಯಾಧ್ಯಕ್ಷರ ಭೇಟಿ

ಕೊಕ್ಕಡ: ಜೇಸಿ ವಲಯ 15 ವಲಯಾಧ್ಯಕ್ಷ ಪುರುಷೋತ್ತಮ ಶೆಟ್ಟಿ ಅವರು ಜೇಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಅ.4ರಂದು ಅಧಿಕೃತ ಭೇಟಿ ನೀಡಲಿದ್ದಾರೆ.
ಸಂಜೆ 6.30ಕ್ಕೆ ಸಂತ ಜಾನರ ಶಾಲಾ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಅವರು ಕೊಕ್ಕಡ ಘಟಕದ ನೂತನ ವೆಬ್‌ಸೈಟ್ ಹಾಗೂ ಆಪ್ ಲೋಕಾರ್ಪಣೆ ಮಾಡಲಿದ್ದಾರೆ.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆಯನ್ನು ಸಲ್ಲಿಸಿದ ಕೌಕ್ರಾಡಿ ಚರ್ಚ್ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ವಿಶಾಲಾಕ್ಷಿ ಬಿ, 108 ಆಂಬುಲೆನ್ಸ್ ಸಿಬ್ಬಂದಿ ವಿಲ್ಮಾ ಶ್ವೇತಾ ಸ್ಟೆಲ್ಲಾ, ಹಿರಿಯ ಸದಸ್ಯರಾದ ಯು.ನರಸಿಂಹ ನಾಯಕ್, ನಾಟಿ ವೈದ್ಯರಾದ ಕೆ. ವಸಂತ ಪೂಜಾರಿ ಅವರಿಗೆ ಸನ್ಮಾನ ನಡೆಯಲಿದೆ. ಸ್ಥಳೀಯ ಸಂತ ಜಾನರ ಹಿ.ಪ್ರಾ. ಶಾಲೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಆದ್ಯ, ಯೋಶಿತಾ, ವಿವಿಯನ್ ಸುವಾರಿಸ್, ಅಂಜನಾ, ರಿಷಿಕ್, ಮನಸ್ವಿ, ಕಿಶನ್, ಶ್ರವಣ್, ವೈಷ್ಣವ್, ಧನ್ಯಶ್ರೀ, ಆಕಾಶ್, ವೀಕ್ಷಾ, ಉಜ್ವಲ್, ರಾಯನ್, ಸಾಧನಾ, ನೇತೃಶ್ರೀ, ಚೈತ್ರೇಶ್, ಜಯ, ಪ್ರೆಸಿಲ್ಲಾ ಮಾನ್ಯಶ್ರೀ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು.

ಈ ಸಮಾರಂಭದಲ್ಲಿ ಜೇಸಿ ವಲಯ 15 ರ ಉಪಾಧ್ಯಕ್ಷರಾದ ಭರತ್ ಶೆಟ್ಟಿ, ವಲಯಾಧಿಕಾರಿ ಕಾರ್ತಿಕ್ ಬಿ. ಭಾಗವಹಿಸುವವರು. ಸಭೆಗೆ ಎಲ್ಲರಿಗೂ ಮುಕ್ತ ಸ್ವಾಗತವಿದೆ ಎಂದು ಕೊಕ್ಕಡ ಜೇಸಿಐ ಘಟಕಾಧ್ಯಕ್ಷರಾದ ಜಿತೇಶ್ ಎಲ್ ಪಿರೇರಾ ತಿಳಿಸಿದ್ದಾರೆ.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ: ದೇವರ ದರ್ಶನ ಬಲಿ, ಪಲ್ಲ ಪೂಜೆ

Suddi Udaya

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya

ನಾವೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪೂವಪ್ಪ ಗೌಡ, ಕಾರ್ಯದರ್ಶಿಯಾಗಿ ದಿನೇಶ್ ಗೌಡ ಆಯ್ಕೆ

Suddi Udaya

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!