23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ಆಚರಣೆ

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 154ನೇ ಜನ್ಮ ದಿನಾಚರಣೆ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನಾಚರಣೆ ಆಚರಿಸಲಾಯಿತು.

ಸರ್ವಧರ್ಮ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಬಳಿಕ ಗಾಂಧೀಜಿ ಹಾಗೂ ಶಾಸ್ತ್ರಿಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಸಲ್ಲಿಸಿ ಗಾಂಧೀಜಿ ಅವರ ರಘುಪತಿ ರಾಘವ ರಾಜಾರಾಮ್ ಗೀತೆಯನ್ನು ಹಾಡಲಾಯಿತು. ಗಾಂಧೀಜಿ ಅವರ ಜೀವನ ಹಾಗೂ ತತ್ವ ಆದರ್ಶಗಳ ಬಗ್ಗೆ ಟಿ ಜಿ ಟಿ ಶಿಕ್ಷಕರಾದ ಸುರೇಶ್ ಅವರು ಮಾಹಿತಿ ನೀಡಿದರು. ಬಳಿಕ ಶಾಲಾವರಣವನ್ನು ಸ್ವಚ್ಛಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ದಾನಿಗಳು ಹಿರಿಯರಾದ ಗೋವಿಂದ ಭಟ್, ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಿರಾಜ್ ಚಿಲಿಂಬಿ, ಶಾಲಾ ಮುಖ್ಯೋಪಾಧ್ಯಾಯರಾದ ಭಾಸ್ಕರ್, ಶಿಕ್ಷಕ ವೃಂದ, ಅಕ್ಷರ ದಾಸೋಹ ಸಿಬ್ಬಂದಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Related posts

ದ.ಕ ಜಿಲ್ಲೆಯ 8 ಕ್ಷೇತ್ರಗಳಲ್ಲೂ ಬಿಜೆಪಿ ಜಯಭೇರಿ ಭಾರಿಸಲಿದೆ: ಬೆಳ್ತಂಗಡಿ ಕ್ಷೇತ್ರದಲ್ಲಿ ಹರೀಶ್ ಪೂಂಜ 50 ಸಾವಿರ ಮತಗಳ ಅಂತರದಿಂದ ಗೆಲುವು: ಬಿಜೆಪಿ ಪ್ರಚಾರ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಹೇಳಿಕೆ

Suddi Udaya

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

Suddi Udaya

ದ್ವಿಚಕ್ರ ವಾಹನಗಳ ಅಪಘಾತ: ಮೂವರಿಗೆ ಗಂಭೀರ ಗಾಯ

Suddi Udaya

ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಉದ್ಘಾಟನಾ ಸಮಾರಂಭ

Suddi Udaya

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya
error: Content is protected !!