ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆಯ ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ಘೋಷಣೆ ಮಾಡುವ ಕಾರ್ಯಕ್ರಮವು ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಅ.2ರಂದು ನಡೆಯಿತು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಇವರು ರಾಜ್ಯದ 5 ನಗರಗಳ ಪೈಕಿ ಧರ್ಮಸ್ಥಳ ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತ ಗ್ರಾಮವನ್ನಾಗಿ ಮಾಡುವ ಬಗ್ಗೆ ಆದೇಶ ಮಾಡಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಘೋಷಣೆ ಮಾಡಿದರು.

ವೇದಿಕೆಯಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಮಲ, ದ.ಕ.ಜಿ.ಪಂ ಸಿಎಓ ಪ್ರಸನ್ನ ಭಕ್ತ, ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಪಿ.ಶ್ರೀನಿವಾಸ್ ರಾವ್, ಬೆಳ್ತಂಗಡಿ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎಲ್ಲಾ ಗಣ್ಯರಿಂದ ವಸ್ತು ಪ್ರದರ್ಶನ ವೀಕ್ಷಣೆ ಹಾಗೂ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಮರ್ಪಿಸಲಾಯಿತು.

ಶ್ರೀ.ಕ್ಷೇತ್ರ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ನಾಡಗೀತೆ ಮೊಳಗಿತು ಹಾಗೂ ರಘುಪತಿ ರಾಘವ ರಾಜರಾಂ ಭಜನೆ ನಡೆಯಿತು. ಧರ್ಮಸ್ಥಳ ಗ್ರಾ.ಪಂ.ಉಪಾಧ್ಯಕ್ಷ ಪಿ.ಶ್ರೀನಿವಾಸ್ ರಾವ್ ಪ್ರಸ್ತಾವನೆಗೈದು ಸ್ವಾಗತಿಸಿದರು. ಗ್ರಾ.ಪಂ ನ ದೇವಿಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು. ಪಂ.ಅ.ಅಧಿಕಾರಿ ಉಮೇಶ್ ಕೆ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಶಿಬಾಜೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಿಂದ ವಿನೂತನ ಯೋಜನೆ: ಕ್ಷೇತ್ರದಿಂದ ಹೊರಗಿದ್ದರೂ ಪ್ರತಿದಿನದ ಪೂಜೆಯನ್ನು ಯೂಟ್ಯೂಬ್ ಮೂಲಕ ನೇರವಾಗಿ ನೋಡುವ ಅವಕಾಶ

Suddi Udaya

ಧರ್ಮಸ್ಥಳದಲ್ಲಿ ವಿಜಯದಶಮಿ ಪ್ರಯುಕ್ತ ತೆನೆಹಬ್ಬ ಆಚರಣೆ

Suddi Udaya

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಬೆಳ್ತಂಗಡಿ ಕ್ಷೇತ್ರದ 81 ಗ್ರಾಮಗಳಿಗೆ ಭೇಟಿ

Suddi Udaya
error: Content is protected !!