September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಜನ್ಮ ದಿನಾಚರಣೆ ಹಾಗೂ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆ

ನಾವೂರು ಗ್ರಾಮ ಪಂಚಾಯತಿನಲ್ಲಿ ಭಾರತದ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಜನ್ಮ ದಿನಾಚರಣೆ ಹಾಗೂ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಗ್ರಾಮ ಸಭೆಯು ಅ.2 ರಂದು ನಡೆಸಲಾಯಿತು.

2024-2025 ನೇ ಸಾಲಿನ ಕ್ರಿಯಾ ಯೋಜನೆ ತಯಾರಿ ಬಗ್ಗೆ ಫಲಾನುಭವಿಗಳಿಂದ ಅರ್ಜಿಗಳನ್ನು ಸ್ವೀಕರಿಸಲಾಯಿತು. ಆಯುಷ್ಮಾನ್ ಕಾರ್ಡ್ ಬಾಕಿ ಇರುವ ಅರ್ಹ ಫಲಾನುಭವಿಗಳಿಗೆ ಕಾರ್ಡ್ ಗಳನ್ನು ನೀಡುವ ಬಗ್ಗೆ ಗ್ರಾಮ ಸಭೆಯಲ್ಲಿ ಚರ್ಚಿಸಲಾಯಿತು. ಒಡಿಎಫ್ ಪ್ಲಸ್ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಾವೂರು ಗ್ರಾಮವನ್ನು ಒಡಿಎಫ್ ಪ್ಲಸ್ ಮೊಡೆಲ್ ಗ್ರಾಮ ಎಂದು ಘೋಷಿಸಲಾಯಿತು. ಅಧ್ಯಕ್ಷರ ಪರವಾಗಿ ಸದಸ್ಯ ಗಣೇಶ ಗೌಡರವರು ಘೋಷಣೆ ಓದಿದರು .

ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಸುನಂದ ವಹಿಸಿದರು. ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಶ್ರೀಮತಿ ಮಮತ, ಸದಸ್ಯರಾದ ಗಣೇಶ್ ಗೌಡ , ಹರೀಶ್ ಸಾಲಿಯಾನ್, ಬಾಲಕೃಷ್ಣ ಎಂ ಕೆ, ಶ್ರೀಮತಿ ವೇದಾವತಿ, ಎನ್ ಕೆ ಹಸೈನಾರ್ ಮತ್ತು ತೃಪ್ತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ,ಎಂ.ಬಿ.ಕೆ ,ಸದಸ್ಯರು ,ಅಂಗನವಾಡಿ ಕಾರ್ಯಕರ್ತರು ,ಆಶಾ ಕಾರ್ಯಕರ್ತರು ,ಗ್ರಾಮಸ್ಥರು ,ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಭಾಗವಹಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಕೆ. ವೆಂಕಟ ಕೃಷ್ಣರಾಜ ಸ್ವಾಗತಿಸಿ ಮಾಹಿತಿ ನೀಡಿ ಧನ್ಯವಾದವಿತ್ತರು. ನಂತರ ದ.ಕ .ಜಿ.ಪಂ ಪ್ರಾಥಮಿಕ ಶಾಲೆ ಮತ್ತು ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ರೋಹಿಣಿ ಹಾಗೂ ಸಹ ಅಧ್ಯಾಪಕರು, ಶಾಲಾ ಮಕ್ಕಳು , ಗ್ರಾಮಸ್ಥರು ಸೇರಿ ನಾವೂರು ಪೇಟೆ ಹಾಗೂ ಶಾಲಾ ವಠಾರದಲ್ಲಿ ಸ್ವಚ್ಛತೆ ಮಾಡಿದರು.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ರೇಣುಕಾ ಪ್ರಸಾದ್ ರವರಿಂದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ಸನ್ನಿಧಾನಕ್ಕೆ ಬೆಳ್ಳಿ ರಥ ಸಮರ್ಪಣೆ: ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಗೌರವಾರ್ಪಣೆ

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya

ಮಚ್ಚಿನ ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya
error: Content is protected !!