ಬಳಂಜ ಗ್ರಾ.ಪಂ. ನ ಅಭಿವೃದ್ಧಿಯ ಓಟಕ್ಕೆ ಒಲಿದ ಪ್ರತಿಷ್ಠಿತ ಗಾಂಧಿ ಪುರಸ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್,ಸಚಿವ ಪ್ರಿಯಾಂಕ್ ಖರ್ಗೆರವರಿಂದ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ: ಗ್ರಾಮ ಪಂಚಾಯತುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ, ಜನಪರ ಆಡಳಿತ, ಪಂಚಾಯತು ವ್ಯಾಪ್ತಿಯಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ಪಂಚಾಯತಕ್ಕೆ ಆದಾಯ ಮೂಲಗಳ ನಿರ್ಮಾಣ ಮೊದಲಾದ ಉತ್ತಮ ಕಾರ್ಯಗಳನ್ನು ಪರಿಗಣಿಸಿ 2022-23ನೇ ಸಾಲಿನ ಪ್ರತಿಷ್ಠಿತ `ಗಾಂಧಿ ಗ್ರಾಮ ಪುರಸ್ಕಾರ’ ಪ್ರಶಸ್ತಿ ಅರ್ಹವಾಗಿ ಬಳಂಜ ಗ್ರಾಮ‌ ಪಂಚಾಯತ್ ಗೆ ಒಲಿದು ಬಂದಿದೆ.

ಅ.2 ಗಾಂಧಿ ಜಯಂತಿಯಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ವಿಧಾನ ಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್ ಹಾಗೂ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಪ್ರಿಯಾಂಕ್ ಖರ್ಗೆರವರಿಂದ ಬಳಂಜ ಗ್ರಾಮ ಪಂಚಾಯತ್ ದ ಅಧ್ಯಕ್ಷೆ ಶೋಭಾ ಕುಲಾಲ್, ಪಂ.ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್,ಮಾಜಿ ಅಧ್ಯಕ್ಷ ಹೇಮಂತ್, ಉಪಾಧ್ಯಕ್ಷ ಯಶೋಧರ ಶೆಟ್ಟಿ ಹಾಗೂ ಸದಸ್ಯರು ಭಾಗವಹಿಸಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ಪುರಸ್ಕಾರದಲ್ಲಿ ಪ್ರಶಸ್ತಿ ಪತ್ರ, ಪ್ರಶಸ್ತಿ ಫಲಕ ಮತ್ತು ರೂ.5 ಲಕ್ಷಗಳ ನಗದು ಬಹುಮಾನವನ್ನು ಒಳಗೊಂಡಿರುತ್ತದೆ.

Leave a Comment

error: Content is protected !!