September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಕಳೆಂಜ: ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ, ಪಾದೆ ಅಂಗನವಾಡಿ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಶಿಬರಾಜೆ, ಪಾದೆ ಹಾಗೂ ಜೆಸಿಐ ಕೊಕ್ಕಡ, ಕಪಿಲಾ ಘಟಕ ಇವುಗಳ ಜಂಟಿ ಆಶ್ರಯದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಅ.1 ರಂದು ನಡೆಯಿತು.


ಕಳೆಂಜ ಗ್ರಾ.ಪಂ. ಸದಸ್ಯ ನಿತ್ಯಾನಂದ ರೈ ಸ್ವಚ್ಛತಾ ಹಿ ಸೇವಾ ಪ್ರತಿಜ್ಞಾ ವಿಧಿಯನ್ನು ವಾಚಿಸಿದರು. ನಂತರ ಶಿಬರಾಜೆ, ಪಾದೆ ಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆ ಮಾಡಲಾಯಿತು.


ಸ್ವಚ್ಛತಾ ಅಭಿಯಾನ ಕಾರ್ಯಕ್ರಮದಲ್ಲಿ ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಪ್ರತಿಮಾ ನಾರಾಯಣ, ಸದಸ್ಯರುಗಳಾದ ಜಯವರ್ಮ ಜೈನ್, ಸೆವ್ರಿನ್ ಲಕ್ಷ್ಮೀ ನಾರಾಯಣ, ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಅಧ್ಯಕ್ಷ ಪಿ.ಟಿ. ಸೆಬಾಸ್ಟಿನ್, ಜೆಸಿಐ ಸದಸ್ಯರಾದ ಸಂತೋಷ್ ಜೈನ್, ಅಕ್ಷತ್ ರೈ, ಅರಣ್ಯ ಸಮಿತಿಯ ಅಧ್ಯಕ್ಷ ಧನಂಜಯ ಗೌಡ, ಕಳೆಂಜ ಗ್ರಾ.ಪಂ. ಸದಸ್ಯೆ ಪ್ರೇಮಾ ಬಿ.ಎಸ್. ಕಳೆಂಜ ಸಿ.ಎ. ಬ್ಯಾಂಕ್ ನಿರ್ದೇಶಕ ರಾಜೇಶ್, ಸಂಜೀವಿನಿ ಕೃಷಿ ಸಖಿ ಸುಮಿತ್ರಾ, ಹೊನ್ನಪ್ಪ ಗೌಡ, ರಾಘವ ಗೌಡ ಬಲ್ಕಾಜೆ, ಧನುಷ್, ಧನ್ಯಾ, ಬಾಬು ರೈ, ನಾರಾಯಣ ಮಾರ್ತಾಡಿ, ಅಶ್ವಥ್, ಅಮೃತ್, ಮಕ್ಕಳು ಉಪಸ್ಥಿತರಿದ್ದರು.


ಅಕ್ಷತ್ ರೈ ಸಿಹಿತಿಂಡಿ ವಿತರಿಸಿದರು. ಅಂಗನವಾಡಿ ಕಾರ್ಯಕರ್ತೆ ಪ್ರಿಯಾ ಸ್ವಾಗತಿಸಿದರು. ಅಂಗನವಾಡಿ ಸಹಾಯಕಿ ಅನ್ಸಿಲ್ಲಾ ವಂದಿಸಿದರು.

Related posts

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಮುಂಡಾಜೆ: ಕಾಯರ್ತೋಡಿಯಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ವೇಣೂರು ಕಾಲೇಜು ವಿದ್ಯಾರ್ಥಿನಿ ಅಸೌಖ್ಯದಿಂದ ನಿಧನ: ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

Suddi Udaya

ತೆಂಕಕಾರಾಂದೂರು ಗ್ರಾಮದಲ್ಲೊಂದು ಕೇಳುವವರಿಲ್ಲದ ಅಂಬೇಡ್ಕರ್ ಭವನ: ಗಾಳಿ ಮಳೆಗೆ ಮೇಲ್ಛಾವಣಿ ಕುಸಿದರು ಗಮನಿಸಿದ ಸಂಬಂಧಪಟ್ಟ ಇಲಾಖೆ: ನೂತನ ಅಂಬೇಡ್ಕರ್ ಭವನ ನಿರ್ಮಿಸಿ ಅಥವಾ ದುರಸ್ತಿಗೊಳಿಸುವಂತೆ ಅಶ್ರಫ್ ಕಟ್ಟೆಯವರಿಂದ ಮನವಿ

Suddi Udaya

ಅಳದಂಗಡಿ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಚುನಾವಣಾ ಪ್ರಚಾರ ಸಭೆ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಚಂದ್ರಹಾಸ ಬಳಂಜರಿಗೆ ಪ್ರಶಸ್ತಿ

Suddi Udaya
error: Content is protected !!