25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕಾಯರ್ತಡ್ಕ: ಹದಗೆಟ್ಟ ರಸ್ತೆ, ಶಿಲಾನ್ಯಾಸಗೊಂಡ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸಿ, ಪ್ರತಿಭಟನೆಗೆ ಗ್ರಾಮಸ್ಥರ ಸಿದ್ದತೆ

ಕಳೆಂಜ: ಕಳೆಂಜ, ಕುದ್ರಾಯ, ಬರೆಂಗಾಯ, ಕಾಯರ್ತಡ್ಕ, ಮಿಯ್ಯಾರು, ನೆರಿಯ ಹಾದೂ ಹೋಗುವ ಪಿಡಬ್ಲ್ಯೂ ರಸ್ತೆಯು ಕಳೆಂಜ ಗ್ರಾಮದ ಮರಕ್ಕಡ ಹೈಸ್ಕೂಲ್ ಸಮೀಪದಿಂದ ಮಿಯ್ಯಾರು ಹೊಸಂಗಡಿ ತನಕ ರಸ್ತೆಯು ಸಂಪೂರ್ಣ ಹದೆಗೆಟ್ಟಿದ್ದು ದೊಡ್ಡ ದೊಡ್ಡ ಹೊಂಡಗಳಿಂದ ಕೂಡಿದೆ.

ವಾಹನ ಸವಾರರಿಗೆ, ಶಾಲೆಗೆ ಹೋಗುವ ಶಾಲಾ ಮಕ್ಕಳಿಗೆ ಇನ್ನಿತರ ಕೆಲಸ ಕಾರ್ಯಗಳಿಗೆ ಹೋಗುವ ಗ್ರಾಮಸ್ಥರಿಗೆ ಸಮಸ್ಯೆ ಉಂಟಾಗಿದೆ. ಈಗಾಗಲೇ ಕೆಲವು ದ್ವಿಚಕ್ರ ವಾಹನಗಾರರು ರಸ್ತೆಯ ಹೊಂಡಕ್ಕೆ ಬಿದ್ದು ಗಾಯಗೊಂಡಿದ್ದಾರೆ,


ಕಳೆದ ಅವಧಿಯಲ್ಲಿ ಸರಕಾರದ ಅನುದಾನದಿಂದ ರೂ.7 ಕೋಟಿ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸಗೊಂಡಿದ್ದು ಆದರೆ ಈಗಿನ ಸರಕಾರವು ಸಾರ್ವಜನಿಕ ರಸ್ತೆ ಇನ್ನಿತರ ಕಾಮಗಾರಿಯ ಅನುದಾನವನ್ನು ಬಿಡುಗಡೆಗೊಳಿಸಲು ವಿಫಲವಾಗಿದೆ.

ಕೂಡಲೇ ಸರಕಾರ ತಡೆಹಿಡಿದ ಕಾಮಗಾರಿಗಳ ಅನುದಾನವನ್ನು ಬಿಡುಗಡೆಗೊಳಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆಗೆ ಗ್ರಾಮಸ್ಥರು ಸಿದ್ದತೆ ನಡೆಸುತ್ತಿದ್ದಾರೆ ಎಂದು ಕಳೆಂಜ ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಪ್ರಸನ್ನ ಎ.ಪಿ, ಹೋರಾಟಗಾರರಾದ ಉಮೇಶ್ ನಿಡ್ಡಾಜೆ, ರಾಜೇಶ್ ನಿಡ್ಡಾಜೆ, ನಿತಿನ್ ಅಶ್ವತ್ತಡಿ ಇವರುಗಳು ತಿಳಿಸಿರುತ್ತಾರೆ.

Related posts

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ಅತಿಥಿ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ರಸ್ತೆಯುದ್ದಕ್ಕೂ ಭವ್ಯ ಸ್ವಾಗತ

Suddi Udaya

ವೇಣೂರು ಜಿನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಟಿ.ಸಿ.ಎಲ್ ಲಾಂಡ್ರಿ ಸರ್ವಿಸ್ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ನಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಲಕ್ಷದೀಪೋತ್ಸವದ ಪೂರ್ವ ತಯಾರಿ ಸಭೆ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ನಕ್ಸಲರಿಗೆ ಶರಣಾದ ಸರ್ಕಾರ ಅಭಿವೃದ್ಧಿಯ ಕನಸು ಹುಸಿಯಾಗಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya
error: Content is protected !!